Advertisement

Hubli: ನಮ್ಮ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ: ಯತ್ನಾಳ್‌ ಬಗ್ಗೆ ಟೆಂಗಿನಕಾಯಿ ಮಾತು

01:23 PM Aug 05, 2024 | Team Udayavani |

ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಇನ್ನೊಂದು ಪಾದಯತ್ರೆ ಮಾಡಬೇಕು ಎನ್ನುವುದರಲ್ಲಿ ತಪ್ಪೇನಿಲ್ಲ. ಆದರೆ ಕೆಲವೊಂದು ಹೇಳಿಕೆಗಳ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಅಂಶಗಳನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ. ನಮ್ಮ ಹೈಕಮಾಂಡ್ ದುರ್ಬಲವಾಗಿಲ್ಲ. ಪಕ್ಷದ ಆಂತರಿಕ ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಸರಿಯಲ್ಲ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಈ ಪಾದಯಾತ್ರೆ ಎನ್ನುವ ಯತ್ನಾಳ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು.

ನಾವೇನು ಸನ್ಯಾಸಿಗಳಲ್ಲ: ನಾವಾಗಲಿ ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವನ್ನು ಅತಂತ್ರಗೊಳಿಸುವ ಕೆಲಸಕ್ಕೆ ಕೈಹಾಕುವುದಿಲ್ಲ. ಅಲ್ಲಿನ ಶಾಸಕರೇ ಪಕ್ಷ ಹಾಗೂ ಸರಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಯಾವುದೇ ಸರ್ಕಾರವನ್ನು ಕೆಡುವ ದುಸ್ಸಾಹಾಸಕ್ಕೆ ನಾವು ಮುಂದಾಗುವುದಿಲ್ಲ. ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಜನಾಭಿಪ್ರಾಯ ಕೊಟ್ಟು ಒಳ್ಳೆಯ ಆಡಳಿತ ಮಾಡಲಿ ಎಂದು ಅಧಿಕಾರ ಕೊಟ್ಟಿದ್ದಾರೆ. ಆದರೆ ಭ್ರಷ್ಟಾಚಾರ ಮಾಡಲಿ ಹಾಗೂ ಪೊಲೀಸ್ ಹತ್ಯೆ ಮಾಡಲಿ ಎಂದು ಹೇಳಿಲ್ಲ. ಸರ್ಕಾರ ತಾನಾಗಿಯೇ ಬಿದ್ದರೆ ನಾವು ಸನ್ಯಾಸಿಗಳಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next