Advertisement

ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸ್ಫೋಟ: ಸ್ಟೇಷನ್ ಮಾಸ್ಟರ್ ಅಮಾನತು

06:04 PM Oct 26, 2019 | keerthan |

ಹುಬ್ಬಳ್ಳಿ: ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಟೇಷನ್ ಮಾಸ್ಟರ್ ಮತ್ತು ಆರಪಿಎಫ್ ಎಎಸ್ ಐ ಅಮಾನತು ಮಾಡಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

Advertisement

ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸೋಮವಾರ ನಡೆದ ಘಟನೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಘಟನೆ ಕುರಿತಂತೆ ಸ್ಟೇಶನ್ ಮಾಸ್ಟರ್ ವರುಣ ಕುಮಾರ, ಆರ್ ಪಿಎಫ್ ಎಎಸ್ ಐ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೂರು ದಿನಗಳಲ್ಲಿ ಈ ತನಿಖೆ ಮುಗಿಸುವಂತೆ ಸೂಚನೆ ನೀಡಿದ್ದೇನೆ.

ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ವಿಮಾನ ನಿಲ್ದಾಣದಲ್ಲಿರುವ ಮಾದರಿಯಂತೆ ರೈಲ್ವೆ ನಿಲ್ದಾಣದಲ್ಲಿಯು ವಸ್ತುಗಳ ತಪಾಸಣೆಯ ಸ್ಕ್ಯಾನಿಂಗ್ ಮಶಿನ್ ಗಳನ್ನು ಅಳವಡಿಸಲಾಗುವುದು. ರೈಲ್ವೆ ನಿಲ್ದಾಣದಲ್ಲಿ ಅನಧಿಕೃತ ವ್ಯಕ್ತಿಗಳು ಕಂಡುಬಂದಲ್ಲಿ ಅಂಥವರ ಮೇಲೆ ಕ್ರಮಕ್ಕೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next