Advertisement

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

11:56 AM Apr 15, 2024 | Team Udayavani |

ಹುಬ್ಬಳ್ಳಿ: ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಪ್ರಹ್ಲಾದ್ ಜೋಶಿ ಅವರ ಪರವಾಗಿದ್ದಾರೆ. ಆದರೆ ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಯಡಿಯೂರಪ್ಪ ಹೇಳಿದರು.

Advertisement

ಸೋಮವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಭುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮಿಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮಾಜಿ ಸಚಿವರಾದ ಬಸವರಾಜ ಭೈರತಿ, ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next