Advertisement

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

02:15 PM Oct 21, 2024 | Team Udayavani |

ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ 4-5 ಜನ ಸೇರಿ ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ರವಿವಾರ (ಅ.20) ಸಂಜೆ ಹಳೇಹುಬ್ಬಳ್ಳಿ ಆನಂದ ನಗರದ ಅರ್ಜುನ ನಗರದಲ್ಲಿ ನಡೆದಿದೆ.

Advertisement

ಆನಂದನಗರ ಶಿವಪುತ್ರ ನಗರದ ವಿನಾಯಕ ಚಿತ್ರಗಾರ (21) ಎಂಬಾತನೆ ಹಲ್ಲೆಗೊಳಗಾಗಿದ್ದು, ಸಮೀರ, ಇರ್ಫಾನ್, ದೀಪಕ, ಬಬ್ಲೂ ಮತ್ತಿತರರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಹಳೇಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಂಭೀರವಾಗಿ ಗಾಯಗೊಂಡ ವಿನಾಯಕ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶಗೊಂಡ ಸಮೀರ ಮತ್ತು ಇತರರು ವಿನಾಯಕನಿಗೆ ಚಾಕುವಿನಿಂದ ಇರಿದಿದ್ದಾರೆ. ಪೊಲೀಸರು ಸಮೀರ್‌ ನನ್ನು ಬಂಧಿಸಿದ್ದಾರೆ. ಇನ್ನುಳಿದವರ ಪತ್ತೆ ನಡೆಸುತ್ತಿದ್ದಾರೆ.

ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next