Advertisement

ಟಿಕೆಟ್‌ಗಾಗಿ ಗಲಾಟೆ : ಕಾರ್ಯಕರ್ತನಿಗೆ ಎಚ್‌ಡಿಕೆ ಕಪಾಳಮೋಕ್ಷ!

03:36 PM May 10, 2017 | Team Udayavani |

ಮೈಸೂರು : ಜೆಡಿಎಸ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ತಯಾರಿ ಬಿರುಸಿನಿಂದ ನಡೆಯುತ್ತಿದ್ದು ,ಬುಧವಾರ ಟಿಕೆಟ್‌ಗಾಗಿ ಏರುಧ್ವನಿಯಲ್ಲಿ ಮಾತನಾಡಿದ ಕಾರ್ಯಕರ್ತನಿಗೆ ಎಚ್‌.ಡಿ.ಕುಮಾರಸ್ವಾಮಿ ಅವರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. 

Advertisement

ಎಚ್‌ಡಿಕೆ ನೇತೃತ್ವದಲ್ಲಿ ನಡೆಯುತ್ತಿದ್ದ ಬೂತ್‌ ಮಟ್ಟದ ಸಭೆಯಲ್ಲಿ ಘಟನೆ ನಡೆದಿದ್ದು, ಶಾಸಕ ಜಿ.ಟಿ.ದೇವೇಗೌಡ ಅವರ ಪುತ್ರ ಹರೀಶ್‌ಗೆ ಹುಣಸೂರು ಕ್ಷೇತ್ರದ ಟಿಕೆಟ್‌ ನೀಡಬೇಕೆಂದು ಒತ್ತಾಯಿಸಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ನಡೆದಿದೆ.

ಕಾಂಗ್ರೆಸ್‌ ತೊರೆದು  ಬಂದರೆ ಎಚ್‌. ವಿಶ್ವನಾಥ್‌ ಅವರಿಗೆ ಹುಣಸೂರು ಟಿಕೆಟ್‌ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿರುವ ಹಿನ್ನಲೆಯಲ್ಲಿ ಈ ಗೊಂದಲ ಉಂಟಾಗಿದೆ.ಇನ್ನೊಂದೆಡೆ ಪ್ರಜ್ವಲ್‌ ರೇವಣ್ಣ ಅಭ್ಯರ್ಥಿ ಎಂದು ಕೆಲ ಕಾರ್ಯಕರ್ತರು ಬಿಂಬಿಸಿ ಪ್ರಚಾರ ನಡೆಸಿದ್ದಾರೆ. 

ಜಿ.ಟಿ.ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೂ ಹುಣಸೂರಿನಲ್ಲಿ ಪ್ರಭಾವ ಹೊಂದಿದ್ದು, ಪುತ್ರನಿಗೆ ಜೆಡಿಎಸ್‌ ಟಿಕೆಟ್‌ ಪಡೆಯುವ ಪ್ರಯತ್ನದಲ್ಲಿದ್ದು ಈಗಾಗಲೇ ಕಾರ್ಯಕರ್ತರೊಂದಿಗೆ ಬೆರೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next