Advertisement
ಮಂಗಳವಾರ ನಟಿ ರಿಯಾ ಚಕ್ರವರ್ತಿ ಅವರ ವಿರುದ್ಧ ಸುಶಾಂತ್ ಅವರ ತಂದೆ ಪಟ್ನಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
Related Articles
Advertisement
ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಣ್ ಜೋಹರ್ ಅವರನ್ನು ಮುಂಬಯಿ ಪೊಲೀಸರು ವಿಚಾರಣೆಗೆ ಕರೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸುಶಾಂತ್ ಸಿಂಗ್ ಸಾವಿನ ಕುರಿತು ಚಿತ್ರರಂಗದ ಕೆಲವು ಖ್ಯಾತನಾಮರು ಅನುಮಾನ ವ್ಯಕ್ತಪಡಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಪಟ್ನಾದಲ್ಲಿ ಎಫ್ಐಆರ್ ದಾಖಲಾದ ಬಳಿಕ ನಾಲ್ಕು ಸದಸ್ಯರ ತಂಡವನ್ನು ಮುಂಬಯಿಗೆ ಕಳುಹಿಸಲಾಗಿದೆ. ಈ ತಂಡವು ಮುಂಬಯಿ ಪೊಲೀಸರಿಂದ ಕೇಸ್ ಡೈರಿ ಮತ್ತು ಇತರ ಪ್ರಮುಖ ದಾಖಲೆಗಳನ್ನು ಸಂಗ್ರಹಿಸಲಿದೆ.
ಸುಶಾಂತ್ ಅವರ ತಂದೆಯ ಪ್ರಕಾರ, ರಿಯಾ ಚಕ್ರವರ್ತಿ ತನ್ನ ವರ್ಚಸ್ಸನ್ನು ವೃದ್ಧಿಸಲು ಸುಶಾಂತ್ನನ್ನು ಬಳಸಿಕೊಂಡಿದ್ದಾಳೆ. ಸುಶಾಂತ್ನ ಸಂಪರ್ಕಗಳನ್ನು ಬಳಸಿಕೊಂಡು ಬಾಲಿವುಡ್ ಚಿತ್ರೋದ್ಯಮದಲ್ಲಿ ತನ್ನನ್ನು ತಾನು ಒಳ್ಳೆಯ ನಿಟ್ಟಿನಲ್ಲಿ ಸ್ಥಾಪಿಸಿಕೊಳ್ಳುವ ಉದ್ದೇಶವನ್ನು ಇಟ್ಟಿದ್ದಳು ಎಂದಿದ್ದಾರೆ. ರಿಯಾ ಅವರ ಸಂಬಂಧಿಕರು ಸುಶಾಂತ್ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಲು ಪ್ರಾರಂಭಿಸಿದರು ಎಂದು ದೂರಿದ್ದಾರೆ.