Advertisement

Bengaluru: ಗ್ಯಾಸ್‌ ಕಟ್ಟರ್‌ ಬಳಸಿ ಎಟಿಎಂಗೆ ಕನ್ನ: ಲಕ್ಷಾಂತರ ರೂ. ನೋಟುಗಳು ಭಸ್ಮ

02:58 PM Dec 07, 2023 | Team Udayavani |

ಬೆಂಗಳೂರು: ಎಟಿಎಂಗೆ ಕನ್ನ ಹಾಕಲು ಬಂದ ಕಳ್ಳರು ಗ್ಯಾಸ್‌ ಕಟ್ಟರ್‌ ಬಳಸಿದ ಪರಿಣಾಮ ಲಕ್ಷಾಂತರ ರೂಪಾಯಿ ಸುಟ್ಟು ಭಸ್ಮವಾಗಿರುವ ಘಟನೆ ನೆಲಮಂಗಲದ ಹೊರವಲಯದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:Athi I Love You…; ಫ್ಯಾಮಿಲಿಗೆ ಇಷ್ಟವಾಗೋ ಸಿನಿಮಾ

ಸಿಸಿಟಿವಿ ಫೂಟೇಜ್‌ ಪರಿಶೀಲಿಸಿದ ಮುಂಬೈನ ಬ್ಯಾಂಕ್‌ ಅಧಿಕಾರಿಗಳು ಎಟಿಎಂ ಇದ್ದ ಕಟ್ಟಡದ ಮಾಲೀಕರಿಗೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಮಾಹಿತಿ ತಿಳಿದ ಕಟ್ಟಡದ ಮಾಲೀಕ ಘಟನೆ ನಡೆದ ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಗ್ಯಾಸ್‌ ಕಟ್ಟೆರ್‌, ಕಬ್ಬಿಣದ ರಾಡ್‌ ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವುದು ಗಮನಕ್ಕೆ ಬಂದಿತ್ತು.

ಈ ಘಟನೆಯಲ್ಲಿ ಇಬ್ಬರು ಕಳ್ಳರು ಶಾಮೀಲಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣದ ಬಗ್ಗೆ ದೂರು ದಾಖಲಿಸಿಕೊಂಡಿರುವ ನೆಲಮಂಗಲ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next