Advertisement

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

06:42 PM Sep 19, 2024 | Team Udayavani |

ರಾಯಚೂರು: ಕೃಷ್ಣಾ ನದಿಯಿಂದ ಬಂದು ತಾಲೂಕಿನ ಡಿ.ರಾಂಪುರ ಕೆರೆ ಸೇರಿಕೊಂಡಿದ್ದ ಭಾರೀ ಗಾತ್ರದ ಮೊಸಳೆಯನ್ನು ಗ್ರಾಮಸ್ಥರು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಗುರುವಾರ(ಸೆ19) ನಡೆದಿದೆ.

Advertisement

ಗ್ರಾಮದ ಕೆರೆಗೆ ನೀರು ಕುಡಿಯಲು ಹೋದ ಕುರಿಗಳನ್ನು, ಹಂದಿಗಳನ್ನು ಮೊಸಳೆ ತಿಂದು ಹಾಕುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರೆಲ್ಲ ಒಗ್ಗೂಡಿ ಇಂದು ಬಲೆ ಹಾಕಿ ಸೆರೆ ಹಿಡಿದಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಮೊಸಳೆಯನ್ನು ಕೃಷ್ಣ ನದಿಯಲ್ಲಿಯೇ ಗ್ರಾಮದಿಂದ ದೂರದಲ್ಲಿ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೆರೆಯಲ್ಲಿ ಇನ್ನೂ ಎರಡು ಮೊಸಳೆಗಳಿರುವ ಅನುಮಾನಗಳಿದ್ದು, ಅರಣ್ಯ ಇಲಾಖೆ ಸಿಬಂದಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next