Advertisement

ಕೂಡಲೆ ರಾಜೀನಾಮೆ ನೀಡಿ…ದೆಹಲಿ ಸಿಎಂ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

04:40 PM Feb 04, 2023 | Team Udayavani |

ನವದೆಹಲಿ: ಮದ್ಯ ಮಾರಾಟ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಶನಿವಾರ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಗಳ ಹೊರಗೆ ಬೃಹತ್ ಪ್ರತಿಭಟನೆಯನ್ನು ನಡೆಸಿದೆ.

Advertisement

ಅಬಕಾರಿ ನೀತಿ ಅಕ್ರಮದಲ್ಲಿ ಆಮ್​ ಆದ್ಮಿ ಪಕ್ಷ ಕೋಟ್ಯಂತರ ರೂಪಾಯಿ ಕೊಳ್ಳೆ ಹೊಡೆದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು/ಕಾರ್ಯಕರ್ತರು, ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಸಿ ಅರವಿಂದ ಕೇಜ್ರಿವಾಲ್ ಕೂಡಲೇ ತನ್ನ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಬೇಕೆಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನೆಗೆ ಬ್ಯಾರಿಕೇಡ್ ಹಾಕಿದ್ದು ಪ್ರತಿಭಟನಾಕಾರರು ಬ್ಯಾರಿಕೇಡ್ ಗಳನ್ನೂ ದೂಡಿ ‘ಕೇಜ್ರಿವಾಲ್ ಚೋರ್ ಹೈ’ ಘೋಷಣೆ ಕೂಗಿದರು.

ದೆಹಲಿಯಲ್ಲಿ ಆಪ್​ ಸರ್ಕಾರ 2021-22ನೇ ಸಾಲಿನಲ್ಲಿ ನೂತನ ಅಬಕಾರಿ ನೀತಿಯನ್ನು ರಚಿಸಿತ್ತು. ಅದರಡಿಯಲ್ಲಿ ಸುಮಾರು 849 ಖಾಸಗಿ ವ್ಯಾಪಾರಿಗಳಿಗೆ ಪರವಾನಗಿ ನೀಡಲಾಗಿತ್ತು. ಹೀಗೆ ಪರವಾನಗಿ ನೀಡುವಾಗ ದೊಡ್ಡಮಟ್ಟದ ಅವ್ಯವಹಾರ ನಡೆದಿದೆ. ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ದೆಹಲಿ ಲೆಫ್ಟಿನೆಂಟ್​ ಗವರ್ನರ್​ ವಿ.ಕೆ.ಸಕ್ಸೇನಾ ಅವರು ಆರೋಪಿಸಿದ್ದರು.

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 5 ವ್ಯಕ್ತಿಗಳು ಮತ್ತು 7 ಕಂಪನಿಗಳ ವಿರುದ್ಧದ ಪೂರಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯ ಗುರುವಾರ ಸ್ವೀಕರಿಸಿದೆ.

ಆಮ್ ಆದ್ಮಿ ಪಕ್ಷವು ದೆಹಲಿ ಮದ್ಯ ಹಗರಣದಿಂದ ಬಂದ ಹಣವನ್ನು ಗೋವಾದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸಿದೆ ಎಂದು ಇಡಿ ಹೇಳಿದ ನಂತರ ಪ್ರತಿಭಟನೆಗಳು ನಡೆಸಲಾಯಿತು. “ಇದುವರೆಗಿನ ಈ ಕಿಕ್‌ಬ್ಯಾಕ್‌ನ ಜಾಡುಗಳ ತನಿಖೆಯಿಂದ ಈ ಹಣವನ್ನು ಎಎಪಿಯ ಚುನಾವಣಾ ಪ್ರಚಾರಕ್ಕೆ ಬಳಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

Advertisement

ಇದನ್ನೂ ಓದಿ: ಮಣಿಪುರದಲ್ಲಿ ಸನ್ನಿ ಲಿಯೋನ್ ಫ್ಯಾಷನ್ ಶೋ ಸ್ಥಳದ ಬಳಿ ಗ್ರೆನೇಡ್ ಸ್ಫೋಟ!

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next