Advertisement

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

11:43 PM Apr 29, 2024 | Team Udayavani |

ಬೆಳಗಾವಿ: ಹುಕ್ಕೇರಿ ಪಟ್ಟಣದ ಹೊರವಲಯದ ಧಾರ್ಮಿಕ ಕೇಂದ್ರದಲ್ಲಿ ಅನುಮತಿ ಇಲ್ಲದೇ ಚುನಾವಣ ಪ್ರಚಾರ ನಡೆಸಲು ಬಂದಿದ್ದ ಕಾರ್ಯಕರ್ತರನ್ನು ಪ್ರಶ್ನಿಸಿದ್ದಕ್ಕೆ ಸ್ವಾಮೀಜಿಗಳೊಂದಿಗೆ ದಾಂಧಲೆ‌ ನಡೆಸಿದ ಘಟನೆ ಸೋಮವಾರ ನಡೆದಿದೆ.

Advertisement

ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಅವರ ಬೆಂಬಲಿಗರು ಎನ್ನಲಾದ‌ ಕಾರ್ಯಕರ್ತರು ಕ್ಯಾರಗುಡ್ ಬಳಿಯ ಇಂಚಗೇರಿ ಸಂಪ್ರದಾಯದ ಅವುಜೀಕರ ಆಶ್ರಮದಕ್ಕೆ ಬಂದಿದ್ದಾರೆ. ಅನುಮತಿ ಇಲ್ಲದೇ ಬಂದಿದ್ದಕ್ಕೆ ಸ್ವಾಮೀಜಿ ಪ್ರಶ್ನಿಸಿದ್ದಾರೆ. ಆಗ ಗಲಾಟೆ ಆಗಿದ್ದು, ಈ ಬಗ್ಗೆ ಸ್ವಾಮೀಜಿ ಹುಕ್ಕೇರಿ‌ ಠಾಣೆಯಲ್ಲಿ ದಾಖಲಿಸಿದ್ದಾರೆ.

ಆಶ್ರಮದ ಮಲ್ಲಯ್ಯಾ ಸ್ವಾಮೀಜಿ, ಅಭಿನವ ಮಂಜುನಾಥ ಸ್ವಾಮೀಜಿಗಳನ್ನು ಏಕವಚನದಲ್ಲೇ ಸಂಬೋಧಿಸಿ ಅವಮಾನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ವೇಳೆ ಸ್ವಾಮೀಜಿ-ಶಿಷ್ಯಂದಿರು ಹಾಗೂ ಕಲ್ಲೋಳಕರ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಕೈಕೈ ಮೀಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಕೆಲವರು ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಸುದ್ಧಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಇದೇ ವೇಳೆ ಮಾಜಿ ಸಚಿವ ಶಶಿಕಾಂತ ನಾಯಿಕ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಭೇಟಿ ಮಾಡಿ ಸ್ವಾಮೀಜಿಗೆ ಧೈರ್ಯ ತುಂಬಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next