Advertisement

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನ ಜ.15 ರಿಂದ 15 ದಿನ ಬಂದ್

12:30 PM Jan 12, 2022 | Team Udayavani |

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಉಲ್ಭಣದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ನಾಡಿನ ಪ್ರಸಿದ್ದ ಹುಲಿಗಿಯ ಹುಲಿಗೆಮ್ಮ ದೇವಸ್ಥಾನವನ್ನು ಜ. 15 ರಿಂದ ಜ.31ರ ವರೆಗೂ ಭಕ್ತರ ದರ್ಶನಕ್ಕೆ ನಿರ್ಬಂಧಿಸಿ ಡಿಸಿ ವಿಕಾಸ ಕಿಶೋರ್ ಅವರು ಆದೇಶ ಮಾಡಿದ್ದಾರೆ.

Advertisement

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿವೆ. ಅಲ್ಲದೇ ಹುಲಿಗೆಮ್ಮ ದೇವಸ್ಥಾನಕ್ಕೆ ನಾಡಿನ ವಿವಿಧ ಭಾಗದಿಂದ ಭಕ್ತರು ಆಗಮಿಸುತ್ತಿದ್ದು, ಅಲ್ಲದೆ, ಮುಂದೆ ಜಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜ.15 ರಿಂದ ಜ.31ರ ವರೆಗೂ ಸಾರ್ವಜನಿಕರ ದರ್ಶನಕ್ಕೆ ನಿರ್ಭಂಧಿಸಿ ಆದೇಶ ಹೊರಡಿಸಿದ್ದಾರೆ.

ಆದರೆ ದೇವಸ್ಥಾನದ ಧಾರ್ಮಿಕ ಹಾಗೂ ಸಂಪ್ರದಾಯದಂತೆ ಪೂಜಾ ಕಾರ್ಯ ನಡೆಯಲಿವೆ. ದೇವಸ್ಥಾನ ಆಡಳಿತ ಮಂಡಳಿ  ಮಾತ್ರ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next