Advertisement

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

09:00 AM May 01, 2024 | Team Udayavani |

ಹುಳಿಯಾರು: ಮರದ ಕೊಂಬೆ ಬಿದ್ದು ಕಾರು ಜಖಂಗೊಂಡ ಘಟನೆ ಮಂಗಳವಾರ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತಿಘಟ್ಟ-ಕೈಮರದ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

Advertisement

ಚಲಿಸುತ್ತಿದ್ದ ಕಾರಿನ ಹಿಂಭಾಗದ ಮೇಲೆ ಬೃಹತ್ ಗಾತ್ರದ ಕೊಂಬೆ ಬಿದ್ದಿದ್ದರಿಂದ ಕಾರು ಸಂಪೂರ್ಣ ಸ್ಕ್ರ್ಯಾಪ್ ಆಗಿದ್ದು, ಚಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಜಖಂಗೊಂಡಿರುವ ಕಾರು ತುಮಕೂರು ನಗರದ ಶಾಂತಿನಗರ ನಿವಾಸಿ ಶಂಕ್ರಪ್ಪ ಎಂಬವರ ಮಗ ಉಮೇಶ್ ಎಂಬವರಿಗೆ ಸೇರಿದ್ದು, ಇವರು ಬಿಸ್ಕೆಟ್ ವಿತರಣೆದಾರ ಎಂದು ಮಾಹಿತಿ ಸಿಕ್ಕಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಲಿಮಿಟ್ಸ್ ಪೊಲೀಸ್ ಠಾಣಾಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದಾರೆ.

ರಸ್ತೆಯ ಬದಿಯಲ್ಲಿ ಸಂಪೂರ್ಣವಾಗಿ ಒಣಗಿದ ಮರಗಳ ರೆಂಬೆ-ಕೊಂಬೆಗಳು ರಸ್ತೆಯಲ್ಲಿ ಸಾಗುವ ಕಾರು-ಬೈಕುಗಳ ಮೇಲೆ ಮುರಿದು ಬೀಳುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ಇದರ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next