Advertisement

ಮಾನವ ಹಕ್ಕು ಆಯೋಗ: ಶ್ಯಾಮ್‌ ಭಟ್‌ ಪ್ರಭಾರ ಅಧ್ಯಕ್ಷ

12:51 AM Apr 13, 2024 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರೂ ಆಗಿರುವ ನಿವೃತ್ತ ಐಎಎಸ್‌ ಅಧಿಕಾರಿ ಡಾ| ಟಿ. ಶ್ಯಾಮ್‌ ಭಟ್‌ ಅವರನ್ನು ಆಯೋಗದ ಪ್ರಭಾರ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯಪಾಲರು ಆದೇಶಿಸಿದ್ದಾರೆ.

Advertisement

ಹಿಮಾಚಲ ಪ್ರದೇಶ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾ| ಎಲ್‌. ನಾರಾಯಣ ಸ್ವಾಮಿ ಅವರನ್ನು ಈ ಹಿಂದೆ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಆಯೋಗದ ಸದಸ್ಯರಾಗಿರುವ ಶ್ಯಾಮ್‌ ಭಟ್‌ ಅವರಿಗೆ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ.

ಪ್ರಸ್ತುತ ಆಯೋಗದ ಸದಸ್ಯರಾಗಿರುವ ನಿವೃತ್ತ ಜಿಲ್ಲಾ ನ್ಯಾ| ಎಸ್‌.ಕೆ.ವಂಟಿಗೋಡಿ ಅವರು ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next