Advertisement

Humanabad;ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ: ಇಬ್ಬರು ಮೃತ್ಯು

12:31 AM Jan 22, 2024 | Team Udayavani |

ಹುಮನಾಬಾದ್ : ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಯುವಕರು ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ರವಿವಾರ ರಾತ್ರಿ ನಡೆದಿದೆ.

Advertisement

ಶ್ರೀ ಪ್ರಸನ್ನ ಪ್ರೀ ಪೋಸಶಿಂಗ್ ಲಿಮಿಟೆಡ್ ಕಂಪನಿಯಲ್ಲಿ ಈ ಅವಘಡ ಸಂಭವಿಸಿದೆ. ಅನೀಲ ಸೋರಿಕೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ತಾಲೂಕಿನ ವಡ್ಡನಕೇರಾ ಗ್ರಾಮದ ಮಹ್ಮದ್ ಶಾಬಾದ್ (21) ಹಾಗೂ ಮಧ್ಯಪ್ರದೇಶದ ಇಂದ್ರಜಿತ್ ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಘಟಕ ಸ್ಥಗಿತಗೊಳಿಸುವ ಕಾರ್ಯ ನಡೆಸಿದ್ದಾರೆ ಎನ್ನಲಾಗಿದ್ದು, ಕಾರ್ಖಾನೆಗೆ ಸಂಬಂಧಿಸಿದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಜನರು ಸರ್ಕಾರಿ ಆಸ್ಪತ್ರೆ ಹತ್ತಿರ ಜಮಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next