Advertisement

ವಿಜಯಪುರ : ರಸ್ತೆ ಅಪಘಾತ ; ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಶಾಸಕ

01:37 PM May 04, 2022 | Team Udayavani |

ವಿಜಯಪುರ : ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯಲ್ಲಿ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಜಿಲ್ಲೆಯ ಶಾಸಕರೊಬ್ಬರು ಮಾನವೀಯತೆ ಮೆರೆದಿದ್ದಾರೆ.

Advertisement

ನಾಗಠಾಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ -52 ರ ವಿಜಯಪುರ ತಾಲೂಕಿನ ಕನ್ನಾಳ ಗ್ರಾಮದ ವೈನ್ ಫ್ಯಾಕ್ಟರಿ ಹತ್ತಿರ  ಎರಡು ಬೈಕ್ ಗಳ ಮಧ್ಯೆ ಬುಧವಾರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿ ಮೃತಪಟ್ಟಿದ್ದ.

ಗಂಭೀರ ಗಾಯಗೊಂಡಿದ್ದ ಇನ್ನಿಬ್ಬರು ತೀವ್ರ ರಕ್ತಸ್ರಾವವಾಗಿ ಪರದಾಡುತ್ತಿದ್ದರು. ಈ ಸಂದರ್ಭದಲ್ಲಿ ಇದೇ ಮಾರ್ಗವಾಗಿ ಸಾಗುತ್ತಿದ್ದ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಕೂಡಲೇ ವಾಹನ ನಿಲ್ಲಿಸಿ, ಅಂಬ್ಯುಲೆನ್ಸ್ ಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ, ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: Updates: ರಾಜ್ ಠಾಕ್ರೆ ಗಡುವು ಅಂತ್ಯ, ಮೊಳಗಿದ ಹನುಮಾನ್ ಚಾಲೀಸಾ; MNS ಕಾರ್ಯಕರ್ತರ ಬಂಧನ

ಗಾಯಾಳುಗಳನ್ನು ವಿಜಯಪುರ ನಗರದ ಆಶ್ರಮ ಕಾಲೋನಿ ನಿವಾಸಿಗಳೆಂದು, ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಯನ್ನು ಡೊಮನಾಳ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

Advertisement

ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದ ಶಾಸಕ ದೇವಾನಂದ ಅವರ ಈ ಮಾನವೀಯ ಕಾರ್ಯಕ್ಕೆ ಜನ‌ ಮೆಚ್ಚುಗೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next