Advertisement

ಹುಮನಾಬಾದ್: ಭೀಕರ ರಸ್ತೆ ಅಪಘಾತ, ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ

01:48 PM Jul 13, 2023 | Team Udayavani |

ಹುಮನಾಬಾದ್ : ತಾಲೂಕಿನ ಮಾಣಿಕನಗರ- ಕನಕಟ್ಟಾ ಗ್ರಾಮದ ರಸ್ತೆಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಓರ್ವ ಯುವಕ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

Advertisement

ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ್ ಗ್ರಾಮದ ರೋಹಿತ್ ಮಾಣಿಕ್ (23) ಸ್ಥಳದಲ್ಲಿಯೇ ಮೃತಪಟ್ಟ ಯುವಕ. ಈತನ ಜೊತೆಗೆ ಇದ್ದ ಇನ್ನೂ ಇಬ್ಬರು ಶಿವಕುಮಾರ್ ಹಾಗೂ ಶ್ರೀಕಾಂತ್ ಗಂಭೀರ ಗಾಯಗೊಂಡಿದ್ದು, ಇವರ ಸ್ಥಿತಿ ಕೂಡ ಚಿಂತಾಜನಕವಾಗಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಭೀಕರ ಅಪಘಾತ ಕುರಿತು ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಹೇಗೆ ಅಪಘಾತ ಸಂಭವಿಸಿದೆ? ದ್ವಿಚಕ್ರ ವಾಹನಕ್ಕೆ ಹೇಗೆ ಬೆಂಕಿ ಹತ್ತಿಕೊಂಡಿತ್ತು ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವಾಹನವೊಂದು ಅತಿ ವೇಗದಲ್ಲಿ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಸಂಭವಿಸಿರಬೇಕು. ಅಪಘಾತದ ರಭಸಕ್ಕೆ ಮೃತಪಟ್ಟ ಯುವಕನ ರುಂಡ ಕೂಡ ಬೇರ್ಪಟ್ಟಿರಬೇಕು. ವಾಹನಕ್ಕೂ ಕೂಡ ಬೆಂಕಿ ಹೊತ್ತಿಕೊಂಡು ಬೈಕ್ ಸುಟ್ಟಿರಬೇಕು ಎಂದು ಪೊಲೀಸ್ ಅಧಿಕಾರಿಗಳು ಊಹಿಸುತ್ತಿದ್ದಾರೆ.

ಪೊಲೀಸ್ ಅಧಿಕಾರಿಗಳ ಹೆಚ್ಚಿನ ತನಿಖೆಯ ನಂತರ ಘಟನೆಯ ಪೂರ್ಣ ವಿವರ ಹೊರಬರಲಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೂಡಿಗೆರೆ: ಶಾಲೆಯಲ್ಲಿ ಪಾಠ ಕೇಳಬೇಕಾದ ಮಕ್ಕಳು ಬಿಸಿಯೂಟಕ್ಕೆ ನೀರು ತರಲು ಹೋದರೆ?

Advertisement
Advertisement

Udayavani is now on Telegram. Click here to join our channel and stay updated with the latest news.

Next