Advertisement
ಹುಣಸೂರಿನ ಬ್ರಾಹ್ಮಣರ ಬಡಾವಣೆಯಲ್ಲಿ ವಾಸವಿದ್ದ ನಾಗಲಕ್ಷ್ಮಮ್ಮನವರು 90 ವರ್ಷಗಳ ಹಿಂದೆ ಇಲ್ಲಿನ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು. ಅವರ ಮಕ್ಕಳು ಉನ್ನತ ವ್ಯಾಸಂಗ ಪಡೆದು ವಿವಿಧೆಡೆ ಉದ್ಯಮಿಗಳಾಗಿದ್ದು, ಇದೀಗ ಅವರ ಮಕ್ಕಳು ಅಮ್ಮ ನಾಗಲಕ್ಷ್ಮಮ್ಮನವರ ಹೆಸರಿನಲ್ಲಿ ನರಸೀಪುರ ದೊಡ್ಡಮನೆ ಸುಜನ ಚಾರಿಟೇಬಲ್ ಟ್ರಸ್ಟ್ ರಚಿಸಿಕೊಂಡು ಹಲವಾರು ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದಾರೆ.
ದಿ.ನಾಗಲಕ್ಷ್ಮಮ್ಮನವರ ಸ್ಮರಣಾರ್ಥ ಈ ಬಾರಿ ಬಾಲಕಿಯರ ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ವಿದ್ಯುತ್ ಚಾಲಿತ ಪ್ಯಾಡ್ ಬರ್ನಿಂಗ್ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಲ್ಲದೆ, ೮ನೇ ತರಗತಿಯ ೬, ೯ ಮತ್ತು ೧೦ನೇ ತರಗತಿಯ ತಲಾ ಮೂರು ಸೇರಿದಂತೆ ೧೨ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಮಾಹೆಯಾನ ೫೦೦ರೂಗಳ ವಿದ್ಯಾರ್ಥಿವೇತನ ನೀಡುತ್ತಿದ್ದಾರೆ. ಹಿಂದೆ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಗೆ ಕೊಳವೆಬಾವಿ ಹಾಕಿಸಿ ನೀರಿನ ಸೌಲಭ್ಯ ಕಲ್ಪಿಸಿಕೊಟ್ಟಿದ್ದಾರೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನದ ಉಪಕರಣಗಳನ್ನು ತಂದು ಪ್ರಾತ್ಯಕ್ಷತೆ ಮೂಲಕ ವಿವಿಧ ಪ್ರಯೋಗಗಳನ್ನು ಮಾಡಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಹೆಚ್ಚು ಆಸಕ್ತಿ ಬೆಳೆಸಿ ಉತ್ತಮ ಅಂಕ ಪಡೆಯಲು ಸಹಕಾರಿಯಾಗಿದ್ದಾರೆ. ಬಿಇಓ ಶ್ಲಾಘನೆ:
ಟ್ರಸ್ಟ್ ಕೊಡುಗೆಯಾಗಿ ನೀಡಿದ ಪ್ಯಾಡ್ ಬರ್ನಿಂಗ್ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಬಿಇಓ ರೇವಣ್ಣರವರು ತಾಯಿ ಓದಿದ ಶಾಲೆಗೆ ನರಸೀಪುರದ ದೊಡ್ಡಮನೆ ಸುಜನ ಚಾರಿಟಬಲ್ ಟ್ರಸ್ಟ್ ಮೂಲಕ ಅವರ ಮಕ್ಕಳು ಸರಕಾರಿ ಶಾಲೆಗೆ ಅನೇಕ ರೀತಿಯಲ್ಲಿ ನೆರವಾಗುತ್ತಿರುವುದು ಶ್ಲಾಘನೀಯ ಕಾರ್ಯ, ಇತರರಿಗೂ ಮಾದರಿಯೂ ಹೌದೆಂದ ಅವರು ಶಾಲೆಯ ಶಿಕ್ಷಕರಿಗಾಗಿ ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.
Related Articles
Advertisement
ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲೆಯ ಎಲ್ಲ ಶಿಕ್ಷಕರಿಗೆ ಟ್ರಸ್ಟ್ವತಿಯಿಂದ ಗೌರವಿಸಲಾಯಿತು. ಈ ವೇಳೆ ಉಪ ಪ್ರಾಚಾರ್ಯರಾದ ಬಿ.ಎನ್.ಗೀತಾ, ಟ್ರಸ್ಟ್ನ ಸುಜಾತಾರಾವ್, ಎನ್.ಎಸ್.ಪ್ರಕಾಶ್, ಎನ್.ಆರ್.ಕುಮಾರ್ ಹಾಗೂ ಮೀನಾಕ್ಷಿಕುಮಾರ್, ಶಿಕ್ಷಕವೃಂದ ಹಾಜರಿದ್ದರು.