Advertisement

ಯುಗಾದಿ ಹಬ್ಬ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅಪಘಾತ : ಪತಿ ಸಾವು, ಪತ್ನಿಗೆ ಗಾಯ

08:01 PM Apr 04, 2022 | Team Udayavani |

ಹುಣಸೂರು : ಆಟೋ ಮತ್ತು ಬೈಕ್ ನಡುವಿನ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಹನಗೋಡು-ಪಂಚವಳ್ಳಿ ರಸ್ತೆಯ ಕಡೆಮನುಗನಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

Advertisement

ತಾಲೂಕಿನ ಹನಗೋಡು ಹೋಬಳಿಯ ಸಿಂಡೇನಹಳ್ಳಿ ಗ್ರಾಮದ ಬೈಕ್ ಸವಾರ ರಮೇಶ (49) ಮೃತರು. ಪತ್ನಿ ಹೇಮಾ ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದಾರೆ.

ಆಗಿರೋದಿಷ್ಟು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪತ್ನಿ ಹೇಮಾರೊಂದಿಗೆ ಕಡೆಮನುಗನಹಳ್ಳಿಯ ಚಿಕ್ಕಮ್ಮನ ಮನೆಯಲ್ಲಿ ಹಬ್ಬದ ಊಟ ಮುಗಿಸಿಕೊಂಡು ಸಿಂಡೇನಹಳ್ಳಿಯಲ್ಲಿರುವ ತಮ್ಮ ಮನೆಗೆ ವಾಪಸಾಗುತ್ತಿದ್ದ ವೇಳೆ ಎದುರಿಗೆ ಬಂದ ಕೊಡಗಿನ ತಿತಿಮತಿಯ ಆಟೋ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ರಮೇಶ್ ತೀವ್ರ ರಕ್ತಸ್ರಾವ ಗೊಂಡು ಹನಗೋಡು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಪತ್ನಿ ಹೇಮಾರಿಗೂ ಪೆಟ್ಟಾಗಿದ್ದು ಹನಗೋಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಎಸ್.ಐ.ರಾಧಾ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ : ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ 8 ರಂದು ಸಂಪುಟ ವಿಸ್ತರಣೆ

Advertisement
Advertisement

Udayavani is now on Telegram. Click here to join our channel and stay updated with the latest news.

Next