Advertisement

ನ.7ರಿಂದ ದತ್ತಮಾಲಾ ಅಭಿಯಾನ; ಸಾವರ್ಕರ್‌ ಮೊಮ್ಮಗ ಸಾತ್ಯಕಿ ಸಾವರ್ಕರ್‌ ಭಾಗವಹಿಸುವ ನಿರೀಕ್ಷೆ

08:48 PM Oct 11, 2022 | Team Udayavani |

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ನ. 7ರಿಂದ 13ರವರೆಗೆ ದತ್ತಮಾಲಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್‌ ಕುಲಕರ್ಣಿ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7 ದಿನಗಳ ಕಾಲ ನಡೆಯಲಿರುವ ದತ್ತಮಾಲಾ ಅಭಿಯಾನದಲ್ಲಿ, ನ. 7ರಂದು ದತ್ತ ಭಕ್ತರು ದತ್ತಮಾಲೆ ಧರಿಸಲಿದ್ದಾರೆ. ನ. 10ರಂದು ದತ್ತ ದೀಪೋತ್ಸವ, ನ. 12ರಂದು ಪಡಿ ಸಂಗ್ರಹ (ಭಿûಾಟನೆ), ನ. 13ರಂದು ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ, ದತ್ತಪೀಠದಲ್ಲಿ ಹೋಮ, ಹವನ, ಧರ್ಮಸಭೆ ನಡೆಯಲಿದೆ.

ದತ್ತಮಾಲಾ ಅಭಿಯಾನದಲ್ಲಿ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌, ಮಹಾರಾಷ್ಟ್ರ ಹಿಂದೂ ರಾಷ್ಟ್ರಸೇನೆಯ ಧನಂಜಯ್‌ ದೇಸಾಯಿ ಹಾಗೂ ಸಾಧು, ಸಂತರು ಭಾಗವಹಿಸಲಿದ್ದಾರೆ. ಸಾವರ್ಕರ್‌ ಮೊಮ್ಮಗ ಸಾತ್ಯಕಿ ಸಾವರ್ಕರ್‌ ಭಾಗವಹಿಸುವ ನಿರೀಕ್ಷೆ ಇದೆ. ದತ್ತಮಾಲಾ ಅಭಿಯಾನದಲ್ಲಿ 10 ಸಾವಿರಕ್ಕೂ ಅಧಿ ಕ ಜನ ಪಾಲ್ಗೊಳ್ಳಲಿದ್ದಾರೆ ಎಂದರು.

ಹಿಂದೂ ಅರ್ಚಕರ ನೇಮಿಸದಿದ್ದರೆ ಉಗ್ರ ಹೋರಾಟ
ಶ್ರೀರಾಮ ಸೇನೆ ದತ್ತಪೀಠ ವಿಚಾರವಾಗಿ 18 ವರ್ಷಗಳ ಸು ಧೀರ್ಘ‌ ಹೋರಾಟ ನಡೆಸುತ್ತಿದೆ. ನ್ಯಾಯಾಲಯ ಹಿಂದೂ ಅರ್ಚಕರ ನೇಮಕ ಮಾಡುವಂತೆ ಆದೇಶಿಸಿದೆ. ಸದನ ಸಮಿತಿ ವರದಿ ನೀಡಿದೆ. ಆದರೆ, ಹಿಂದೂ ಅರ್ಚಕರ ನೇಮಕ ಮಾಡಲು ರಾಜ್ಯ ಸರಕಾರ ಮೀನಮೇಷ ಎಣಿಸುತ್ತಿದೆ. ನ. 13ರ ಒಳಗೆ ಹಿಂದೂ ಅರ್ಚಕರನ್ನು ನೇಮಕ ಮಾಡದಿದ್ದಲ್ಲಿ ಬೃಹತ್‌ ಹೋರಾಟ ಹಮ್ಮಿಕೊಳ್ಳಲಾಗುವುದು. ಅಹಿತಕರ ಘಟನೆ ಸಂಭವಿಸಿದರೆ ರಾಜ್ಯ ಸರಕಾರವೇ ಹೊಣೆ. ನಿರ್ಲಕ್ಷ್ಯ ಮಾಡಿದರೆ ಮುಂಬರುವ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಗಂಗಾಧರ್‌ ಕುಲಕರ್ಣಿ ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next