Advertisement

Hunsur: ಶುಂಠಿಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

07:19 PM Sep 26, 2024 | Team Udayavani |

ಹುಣಸೂರು: ಶುಂಠಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಬೆಳೆದಿರುವುದನ್ನು ಪತ್ತೆ ಹಚ್ಚಿದ ಗ್ರಾಮಾಂತರ ಠಾಣೆ ಪೊಲೀಸರು ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

Advertisement

ತಾಲೂಕಿನ ನಗರಕ್ಕೆ ಸಮೀಪದ ಕೆಂಚನಕೆರೆಹೊಸಕೋಟೆಯ ಈಶ್ವರ್‌ರ ಪುತ್ರ ಮಹದೇವ್ ಬಂದಿತ ಆರೋಪಿ. 3800ಗ್ರಾಂ ತೂಕದ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆಯಲಾಗಿದೆ.

ಠಾಣೆಯ ಧಫೇದಾರ್ ದಿನೇಶರಿಗೆ ಬಂದ ಮಾಹಿತಿ ಮೇರೆಗೆ ಪಶುವೈದ್ಯ ಡಾ.ಗಿರೀಶ್, ಪಿಡಿಒ ಅರುಣ್ ಸಮ್ಮುಖದಲ್ಲಿ ಇನ್ಸ್ಪೆಕ್ಟರ್ ಮುನಿಯಪ್ಪ ನೇತೃತ್ವದಲ್ಲಿ ಎಎಸ್.ಐ.ಆಂತೋಣಿಕ್ರೂಸ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ ವೇಳೆ ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ. ‌

ಆರೋಪಿಯನ್ನು ನ್ಯಾಯಾಂಗ ಬಂದನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next