Advertisement

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

08:29 PM Aug 13, 2024 | Team Udayavani |

ಹುಣಸೂರು: ಕೃಷಿ ಚಟುವಟಿಕೆಗಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತನೋರ್ವ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹರೀನಹಳ್ಳಿಯಲ್ಲಿ ಆ.13ರ ಮಂಗಳವಾರ ನಡೆದಿದೆ.

Advertisement

ಹನಗೋಡು ಹೋಬಳಿಯ ಹರೀನಹಳ್ಳಿಯ ದಿ. ಸೋಮಶೇಖರ್‌ ಅವರ ಪುತ್ರ ಗುರು(41) ಆತ್ಮಹತ್ಯೆ ಮಾಡಿಕೊಂಡ ರೈತ.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಗುರು ಅವರ ಕುಟುಂಬಕ್ಕೆ 2 ಎಕರೆ ಭೂಮಿಯಿದ್ದು, ವ್ಯವಸಾಯಕ್ಕಾಗಿ ಪಂಚವಳ್ಳಿಯ ಬ್ಯಾಂಕ್‌ ವೊಂದರಿಂದ 5 ಲಕ್ಷ, ಧರ್ಮಸ್ಥಳ ಸಂಸ್ಥೆ ವತಿಯಿಂದ 3 ಲಕ್ಷ ಸಾಲ ಮಾಡಿಕೊಂಡಿದ್ದರು.

ಸಾಲ ಮರಳಿಸಲು ಸಾಧ್ಯವಾಗದೇ ಮನೆಯಲ್ಲಿ ಪರಿತಪಿಸುತ್ತಾ, ತಾನು ಸಾಯುತ್ತೇನೆಂದು ಆಗಾಗ್ಗೆ ಹೇಳುತ್ತಿದ್ದರು. ಆ.13ರ ಮಂಗಳವಾರ ಯಾರೂ ಮನೆಯಲ್ಲಿ ಇಲ್ಲದ ವೇಳೆ ವಿಷ ಕುಡಿದು ಸಾವನ್ನಪ್ಪಿದ್ದಾರೆಂದು ಪತ್ನಿ ಅಶ್ವಿನಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

Advertisement

ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದಲ್ಲಿ ಶವಸಂಸ್ಕಾರ ನಡೆಯಿತು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next