Advertisement

Hunsur: ಕಾರು- ಬೈಕ್ ಮುಖಾಮುಖಿ; ಸವಾರ ಸಾವು

07:46 PM Aug 12, 2023 | Team Udayavani |

ಹುಣಸೂರು: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು-ವಿರಾಜಪೇಟೆ ಹೆದ್ದಾರಿಯ ರಸ್ತೆಯ ಆಡಿಗನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.

Advertisement

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕಾಳಬೂಚನಹಳ್ಳಿಯ ಬೋರೇಗೌಡರ ಪುತ್ರ ತೋಪೇಗೌಡ(45)ಮೃತರು. ಇವರ ಪತ್ನಿ ಮಹದೇವಿ( ಆಶಾ ಕಾರ್ಯಕರ್ತೆ) ಸೇರಿದಂತೆ ಮೂವರು ಮಕ್ಕಳಿದ್ದಾರೆ.

ಕೇರಳ ಕಡೆಯಿಂದ ಹುಣಸೂರು ಕಡೆಗೆ ಬರುತ್ತಿದ್ದ ಕಾರು ಆಡಿಗನಹಳ್ಳಿ ಗೇಟ್ ಬಳಿ ಹುಣಸೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ತೋಪೇಗೌಡರ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ತೀವ್ರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಇನ್ಸ್ಪೆಕ್ಟರ್ ಸಿ.ವಿ.ರವಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next