Advertisement

ಚೆಕ್ ಪೋಸ್ಟ್, ಕಂಟ್ರೋಲ್ ರೂಂ ಸಿಬ್ಬಂದಿಗಳ ಕಾರ್ಯ ವೈಖರಿ ಪರಿಶೀಲಿಸಿದ ಡಿ.ಸಿ. ಡಾ.ರಾಜೇಂದ್ರ

09:54 AM Apr 01, 2023 | Team Udayavani |

ಹುಣಸೂರು: ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಇಲ್ಲಿನ ಸ್ಟಾಂಗ್ ರೂಂ, ಕಂಟ್ರೋಲ್ ರೂಂ, ಚೆಕ್‌ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರಲ್ಲದೆ, ಚುನಾವಣಾ ಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

Advertisement

ಮಾ. 31ರ ಶುಕ್ರವಾರ ಬೆಳಗ್ಗೆ ತಾಲೂಕಿನ ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಿಸಿ, ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.

ನಂತರ ನಗರದ ಸಂತ ಜೋಸೆಫರ ಶಾಲೆಯ ಮಸ್ಟರಿಂಗ್-ಡಿಮಸ್ಟರಿಂಗ್, ಸ್ಟಾಂಗ್ ರೂಂನ ಸ್ಥಳ ಪರಿಶೀಲಿಸಿ, ಕೆಲ ಸಲಹೆ ನೀಡಿದರು.

ತಾಲೂಕು ಕಚೇರಿಯ ಕಂಟ್ರೋಲ್ ರೂಂ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಿಸಿದ ನಂತರ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚುನಾವಣಾ ಸಿದ್ದತೆ ಕುರಿತು ಮಾಹಿತಿ ಪಡೆದುಕೊಂಡು ಕೆಲ ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿಗಳೊಂದಿಗೆ ಚುನಾವಣಾಧಿಕಾರಿ ರುಚಿ ಬಿಂದಾಲ್, ನೋಡಲ್ ಅಧಿಕಾರಿ ಬಿ.ಕೆ.ಮನು, ಉಪ ಚುನಾವಣಾಧಿಕಾರಿ ಡಾ.ಅಶೋಕ್, ಪ್ರೊಬೇಷನರಿ ತಹಸೀಲ್ದಾರ್ ನೂರಲ್ ಹುಧಾ, ಚುನಾವಣಾ ಶಿರಸ್ತೆದಾರ್ ಕಿರಣ್‌ಕುಮಾರ್ ಇದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next