Advertisement

Hunsur: ಗಾವಡಗೆರೆ ಮಠದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನ

10:56 PM Oct 18, 2023 | Team Udayavani |

ಹುಣಸೂರು: ಹುಣಸೂರಿಲ್ಲಿ ನಡೆಸಲುದ್ದೇಶಿಸಿರುವ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಡಿ.ಹರೀಶ್‌ಗೌಡ ಭರವಸೆ ಇತ್ತರು.

Advertisement

ಮೈಸೂರುಜಿಲ್ಲಾ ಪತ್ರಕರ್ತರ ಸಂಘವು ಹುಣಸೂರು ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ತಾಲೂಕಿನ ಗಾವಡಗೆರೆ ಗುರುಲಿಂಗ ಜಂಗಮ ದೇವರ ಮಠದಲ್ಲಿ ನಡೆಸಲುದ್ದೇಶಿಸಿರುವ ಜಿಲ್ಲಾ ಸಮ್ಮೇಳನ ಸಂಬಂಧ ಶಾಸಕರ ನಿವಾಸದಲ್ಲಿ ನಡೆದ ಜಿಲ್ಲಾಧ್ಯಕ್ಷ ಎಸ್.ಟಿ.ರವಿಕುಮಾರ್ ನೇತೃತ್ವದಲ್ಲಿ ಸಂಘಧ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚಿಸಿದ ನಂತರ ಅವರು, ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಪತ್ರಕರ್ತರ ಹಿತಕಾಪಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದ್ದು, ಜಿಲ್ಲಾ ಪತ್ರಕರ್ತರ ಸಂಘವೂ ಸಹ ಹಲವು ಕ್ಷೇಮಾಭಿವೃದ್ಧಿ ಕಾರ್ಯ ಮಾಡುತ್ತಿರುವುದರಿಂದ ಗಾವಡಗೆರೆ ಶ್ರೀ ಮಠದಲ್ಲಿ ನಡೆಸಲುದ್ದೇಶಿಸಿರುವ ಜಿಲ್ಲಾ ಸಮ್ಮೇಳನವನ್ನು ಯಶಸ್ವಿಗೊಳಿಸಲು ತಾವು ಮತ್ತು ತಂದೆ ಜಿ.ಟಿ.ದೇವೇಗೌಡರವರು ಸಹ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿ, ಮಠದ ನಟರಾಜ ಸ್ವಾಮಿಗಳೊಂದಿಗೆ ಚರ್ಚಿಸಿ ಊಟ, ವಸತಿ ಇನ್ನಿತರ ಸೌಲಭ್ಯಕ್ಕಾಗಿ ಕಾರ್ಯಕ್ರಮದ ರೂಪುರೇಷೆ, ಅತಿಥಿಗಳು ಸೇರಿದಂತೆ ಪೂರ್ವತಯಾರಿ ನಡೆಸುವಂತೆ ಸೂಚಿಸಿದರು.

ಜಿಲ್ಲಾ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಮಾತನಾಡಿ, ಈ ಹಿಂದೆಯೇ ಗಾವಡಗೆರೆ ಮಠದಲ್ಲಿ ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಸಿದ್ಧತೆ ನಡೆಸಲಾಗಿತ್ತಾದರೂ, ಅನಿವಾರ್ಯ ಕಾರಣದಿಂದಾಗಿ ಮುಂದೂಡಲಾಗಿತ್ತು. ಇದೀಗ ಸಂಘವು ಹುಣಸೂರು ಪತ್ರಕರ್ತರ ಸಂಘದಆಶ್ರಯದಲ್ಲಿ ಸಮ್ಮೇಳನ ನಡೆಸಲು ಮುಂದಾಗಿದ್ದು, ಸಮ್ಮೇಳನ ಯಶಸ್ವಿಗಾಗಿ ನಟರಾಜಸ್ವಾಮಿಜಿಗಳು ನೆರವಾಗುವುದಾಗಿ ಹೇಳಿದ್ದು, ಎಲ್ಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕುರಿತು ಮಾಹಿತಿ ಒದಗಿಸಿದರು.

ಈ ವೇಳೆ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಗ್ರಾಮಾಂತರ ಉಪಾಧ್ಯಕ್ಷ ಧರ್ಮಾಪುರ ನಾರಾಯಣ, ರಾಜ್ಯ ಸಮಿತಿ ಸದಸ್ಯ ಬಿ.ರಾಘವೇಂದ್ರ, ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next