Advertisement

Hunsur: ನಾಗರಹೊಳೆ ಸಾಕಾನೆ ಶಿಬಿರದ ವಿರಾಟ್ ಸಾವು

01:32 PM Apr 10, 2024 | Team Udayavani |

ಹುಣಸೂರು: ನಾಗರಹೊಳೆ ಉದ್ಯಾನದ ಆನೆ ಚೌಕೂರು ಸಾಕಾನೆ ಶಿಬಿರದಲ್ಲಿ ಆಶ್ರಯ ಪಡೆದಿದ್ದ ವಿರಾಟ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

Advertisement

ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದಂಚಿನಲ್ಲಿ ಉಪಟಳ ನೀಡುತ್ತಿದ್ದ ಸುಮಾರು 50 ವರ್ಷ ಪ್ರಾಯದ ಸಾಕಾನೆಯನ್ನು 2023ರ  ನವೆಂಬರ್‌ 4 ರಂದು ಸೆರೆ ಹಿಡಿದು ವಿರಾಟ್ ಎಂಬ ಹೆಸರಿಟ್ಟು ಸಾಕಲಾಗುತ್ತಿತ್ತು.

ಅನಾರೋಗ್ಯದಿಂದ  ಚಿಕಿತ್ಸೆ ಪಡೆಯುತ್ತಿದ್ದ ಈ ಆನೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಸಾವನ್ನಪ್ಪಿದೆ. ವಿಷಯ ತಿಳಿದ ಎಸಿಎಫ್ ದಯಾನಂದ್, ಆರ್.ಎಫ್.ಓ. ದೇವರಾಜ್ ಭೇಟಿ ನೀಡಿ ಪರಿಶೀಲಿಸಿದರು‌.

ನಾಗರಹೊಳೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿ, ನಂತರ ಶವವನ್ನು ಅಂತ್ಯ ಸಂಸ್ಕಾರ ನಡೆಸಲಾಯಿತೆಂದು  ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next