Advertisement

Hunsur: ಸಾಲಬಾಧೆಯಿಂದ ರೈತ ಆತ್ಮಹತ್ಯೆಗೆ ಶರಣು

08:48 PM Feb 16, 2024 | Team Udayavani |

ಹುಣಸೂರು: ಕೃಷಿ ಚಟುವಟಿಕೆಗಾಗಿ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದ ರೈತರೊಬ್ಬರು ಸಾಲತೀರಿಸಲಾಗದೆ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಶ್ಯಾನುಬೋಗನಹಳ್ಳಿಯಲ್ಲಿ ನಡೆದಿದೆ.

Advertisement

ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ಶ್ಯಾನುಬೋಗನಹಳ್ಳಿಯ ಬೋರೇಗೌಡರ ಪುತ್ರ ಮಹೇಶ್(50) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಪತ್ನಿ ಇಬ್ಬರು ಗಂಡು ಮಕ್ಕಳಿದ್ದಾರೆ.

ಮಹೇಶ್ ಗೆ 3 ಎಕರೆ ಜಮೀನಿದ್ದು, ತಂಬಾಕು ಮತ್ತಿತರ ಬೆಳೆ ಬೆಳೆಯುತ್ತಿದ್ದರು. ಕೃಷಿಚಟುವಟಿಕೆಗಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ 3.75 ಲಕ್ಷ ರೂ. ಹಾಗೂ ಇಂಡಿಯನ್ ಓವರ್ ಸೀಸ್ ಬ್ಯಾಂಕಿನಲ್ಲಿ5 ಲಕ್ಷ ರೂ., ಚಿನ್ನವನ್ನು ಗಿರವಿ ಇಟ್ಟಿದ್ದರಲ್ಲದೆ. ಸಾಕಷ್ಟು ಕೈಸಾಲ ಮಾಡಿಕೊಂಡು ಸಾಲ ತೀರಿಸಲಾಗದೆ ಚಿಂತಿತರಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಅಭಿಷೇಕ್ ಬಿಳಿಕೆರೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next