Advertisement

ಹುಣಸೂರು: ಹಾವು ಕಚ್ಚಿ ರೈತ ಸಾವು

08:02 AM Oct 07, 2022 | Team Udayavani |

ಹುಣಸೂರು: ರಾಗಿ ಹೊಲದಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿದ್ದ ವೇಳೆ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಉದ್ದೂರು ಗ್ರಾಮದಲ್ಲಿ ನಡೆದಿದೆ.

Advertisement

ಉದ್ದೂರು ಗ್ರಾಮದ ಲೇ.ಚಿಕ್ಕೇಗೌಡರ ಪುತ್ರ ನಂಜುಂಡೇಗೌಡ(56) ಮೃತ ರೈತ.

ಇವರಿಗೆ ಇಬ್ಬರು ಪತ್ನಿಯರು, ಮೂವರು ಮಕ್ಕಳಿದ್ದಾರೆ. ಇವರು ತಮ್ಮ ಜಮೀನಿನಲ್ಲಿ ಬುಧವಾರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹಾವು ಕಚ್ಚಿದೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next