Advertisement

Hunsur: ಸಾಲಗಾರರ ಕಿರುಕುಳ; ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ

10:48 AM Jul 28, 2024 | Team Udayavani |

ಹುಣಸೂರು: ಸಾಲಗಾರರ ಕಾಟಕ್ಕೆ ಹೆದರಿ ಆಟೋ ಚಾಲಕ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕುಟುವಾಡಿಯಲ್ಲಿ ನಡೆದಿದೆ.

Advertisement

ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಟುವಾಡಿ ಗ್ರಾಮದ ಆಟೋ ಚಾಲಕ ಪ್ರಸಾದ್ (29) ಜುಲೈ 20 ರಂದು ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದವರು ಆಟೋದಲ್ಲಿ ಹುಡುಕಾಡಿದ ವೇಳೆ  ಡೆತ್ ನೋಟ್ ಪತ್ತೆಯಾಗಿದ್ದು, ತಾನು ಪೈನಾನ್ಸ್ ಮಧು ಎಂಬಾತನಿಂದ ಸ್ನೇಹಿತ ಟೆಂಪೋ ಕಿರಣ್ ರವರ ಜಾಮೀನು ನೀಡಿ 5 ಲಕ್ಷ ರೂ. ಸಾಲ ಪಡೆದಿದ್ದು, ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಇವರು ನಿತ್ಯ ಮನೆಗೆ ಬಂದು ಕೂಗಾಟ ನಡೆಸಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆಂದು ಪತ್ನಿ ಲಕ್ಷ್ಮಿ ಬಿಳಿಕೆರೆ ಠಾಣೆಗೆ ದೂರು ನೀಡಿದ್ದರು.

ಶವವಾಗಿ ಪತ್ತೆ:

ನಾಪತ್ತೆಯಾಗಿದ್ದ ಪ್ರಸಾದ್ ಶವ ಸರಗೂರು ತಾಲೂಕಿನ ಕಪಿಲಾ ನದಿ ದಂಡೆಯ ಸೋಮೇಶ್ವರ ದೇವಾಲಯದ ಬಳಿ ಪತ್ತೆಯಾಗಿದ್ದು, ಈ ಸಂಬಂಧ ಸರಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಶವವನ್ನು ಶವಾಗಾರಕ್ಕೆ ಸಾಗಿಸಿ, ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next