Advertisement

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

08:52 PM Sep 28, 2024 | Team Udayavani |

ಹುಣಸೂರು: ಕ್ಲುಲ್ಲಕ ಕಾರಣಕ್ಕೆ ಹಂದಿಫಾರ್ಮ್ ಕಾರ್ಮಿಕನೊಬ್ಬ ಕೇರಳ ಮೂಲದ ಮ್ಯಾನೇಜರ್‌ನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ (ಸೆ27) ತಾಲೂಕಿನ ಹನಗೋಡಿಗೆ ಸಮೀಪದ ಹೆಬ್ಬಳ್ಳ ಗ್ರಾಮದಲ್ಲಿ ನಡೆದಿದೆ.

Advertisement

ಕೇರಳದ ವಯನಾಡ್ ಜಿಲ್ಲೆಯ ಗಿರೀಶ್ ಅಬ್ರಹಂ(38)ಕೊಲೆಯಾದ ವ್ಯಕ್ತಿ. ಕೇರಳದವನೇ ಆದ ಶಂಸುದ್ದೀನ್ ಕೊಲೆ ಆರೋಪಿಯಾಗಿದ್ದು, ಆತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಗಿರೀಶ್ ಅಬ್ರಹಂ ಮತ್ತು ಆರೋಪಿ ಶಂಸುದ್ದೀನ್ ಕೇರಳ ಮೂಲದ ಹನೀಫ್ ರಿಗೆ ಸೇರಿದ ಹುಣಸೂರು ತಾಲೂಕಿನ ಹೆಬ್ಬಳ್ಳದ ಹಂದಿಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಶಂಸುದ್ದೀನ್ ತನಗೆ ಹೆಚ್ಚಿನ ಕೆಲಸ ಹೇಳುವುದು, ತನ್ನ ವಿರುದ್ದ ಮಾಲಕರಿಗೆ ಚಾಡಿ ಹೇಳುತ್ತಾನೆಂಬ ಕಾರಣಕ್ಕೆ ಶುಕ್ರವಾರ ರಾತ್ರಿ ಶೆಡ್‌ನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಶಂಸುದ್ದೀನ್ ಚಾಕುವಿನಿಂದ ಗಿರೀಶ್ ಬೆನ್ನಿಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುವನ್ನು ಸಹಕಾರ್ಮಿಕರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಗಿರಿಶ್ ಅಬ್ರಹಂ ಕೊಲೆ ಸಂಬಂಧ ಸಹೋದರ ವಿನೋದ್ ಅಬ್ರಹಂ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಎಸ್.ಪಿ.ವಿಷ್ಣುವರ್ಧನ್, ಅಡಿಷನಲ್‌ ಎಸ್‌ಪಿ ನಾಗೇಶ್, ಡಿವೈಎಸ್‌ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ಮುನಿಯಪ್ಪ ಭೇಟಿ ನೀಡಿದ್ದಾರೆ.. ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಶನಿವಾರ(ಸೆ28) ನೇರಳಕುಪ್ಪೆಯ ಬಾರ್ ಬಳಿ ಪೊಲೀಸ್ ಸಿಬಂದಿಗಳಾದ ರವಿ,ಇಮ್ರಾನ್ ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next