Advertisement

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

08:13 AM Apr 19, 2024 | Team Udayavani |

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವಲಯದ ಬಫರ್ ಝೋನ್‌ನಲ್ಲಿ ಸುಮಾರು 9 ವರ್ಷದ ಗಂಡು ಕಾಡುಕೋಣವೊಂದು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದೆ.

Advertisement

ಆನೆಚೌಕೂರು ವನ್ಯಜೀವಿ ವಲಯದ ಚನ್ನಂಗಿ ಶಾಖೆಯ ದೇವಮಚ್ಚಿ ಮೀಸಲು ಅರಣ್ಯ ಪ್ರದೇಶದ ಅಬ್ಬೂರು ಗಸ್ತಿನ ಕೆಸುವಿನಕೆರೆ ಹಾಡಿಯ ಪಿ.ಆರ್.ಮುತ್ತರಿಗೆ ಸೇರಿದ ಅರಣ್ಯ ಹಕ್ಕುಪತ್ರ ಹೊಂದಿರುವ ಜಮೀನಿನಲ್ಲಿ ಕಾಡುಕೋಣದ ಶವ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

ಮಾಹಿತಿ ಮೇರೆಗೆ ಕೃತ್ಯ ನಡೆದ ಸ್ಥಳಕ್ಕೆ ಎಸಿಎಫ್ ದಯಾನಂದ್, ಆರ್.ಎಫ್.ಓ ದೇವರಾಜ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯ ಪಶು ವೈದ್ಯಾಧಿಕಾರಿ ಹಾಗೂ ಆನೆಗಳ ಪ್ರಭಾರಕ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದರು.

ಅಪರಿಚಿತ ದುಷ್ಕರ್ಮಿಗಳ ಮೇಲೆ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕೃತ್ಯ ನಡೆಸಿರುವ ದುಷ್ಕರ್ಮಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next