Advertisement
ಹುಣಸೂರು ತಾಲೂಕಿನ ಗಾವಡಗೆರೆ ಗ್ರಾಮದ ಮರಹಾಲನಾಯಕ ಎಂಬವರಿಗೆ ಸೇರಿದ ಎರಡು ಜಾನುವಾರುಗಳನ್ನು ಮೇಯಲು ಬಿಟ್ಟಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಜಾನುವಾರುಗಳು ಸ್ಥಳದಲ್ಲಿಯೇ ಮೃತಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಶಾಸಕ ಎಚ್.ಪಿ.ಮಂಜುನಾಥ್, ಎಇಇ ಸಿದ್ದಪ್ಪರೊಂದಿಗೆ ಭೇಟಿ ನೀಡಿ ಗ್ರಾಮಸ್ಥರಿಂದ ಮಾಹಿತಿ ಪಡೆದರು.
Related Articles
Advertisement
ಜಾನುವಾರುಗಳನ್ನು ಕಳೆದುಕೊಂಡ ಮರ ಹಾಲನಾಯಕರಿಗೆ ಶಾಸಕರು ವೈಯಕ್ತಿಕವಾಗಿ 20 ಸಾವಿರ ರೂ. ನೆರವು ನೀಡಿದರು. ಸಂಕಷ್ಟಕ್ಕೊಳಗಾಗಿರುವ ಜಾನುವಾರು ಮಾಲಿಕರಿಗೆ ಸೂಕ್ತ ಪರಿಹಾರ ವಿತರಿಸಲು ಕ್ರಮವಹಿಸುವಂತೆ ಎಇಇಗೆ ಸೂಚಿಸಿದರು. ಈ ವೇಳೆ ಗಾವಡಗೆರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ದೇವರಾಜ್, ತಾಪಂ ಮಾಜಿ ಸದಸ್ಯ ಗಣಪತಿ ಇಂಡೋಲ್ಕರ್, ಕುಮಾರ್, ನಾರಾಯಣ್ ಮತ್ತಿತರ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು. ಈ ಪ್ರಕರಣದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.