Advertisement

Hunsur: ಬಸ್‌ಗೆ ಕಲ್ಲು; ಕಿಟಕಿ ಗಾಜಿಗೆ ಹಾನಿ: ಪ್ರಕರಣ ದಾಖಲು

08:13 AM Jul 21, 2023 | Team Udayavani |

ಹುಣಸೂರು: ಸಾರಿಗೆ ಸಂಸ್ಥೆ ಬಸ್ ಗೆ ಹಿಂಬದಿಯಿದ ಬಂದ ಬೈಕ್ ಸವಾರರು ಕಲ್ಲು ತೂರಿದ್ದರಿಂದ ಬಸ್‌ನ ಕಿಟಕಿ ಗಾಜು ಪುಡಿಪುಡಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಮಲ್ಲಿನಾಥಪುರದ ಬಳಿ ನಡೆದಿದೆ.

Advertisement

ಮೂಡಿಗೆರೆ ಡಿಪೊಗೆ ಸೇರಿದ ಸಾರಿಗೆ ಸಂಸ್ಥೆಯ ಬಸ್‌ನ ಕಿಟಕಿ ಗಾಜಿಗೆ ಹಾನಿಯಾಗಿದೆ. ಮೂಡಗೆರೆ, ಹಾಸನ, ಕೆ.ಆರ್.ನಗರ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-275ರ ಮಲ್ಲಿನಾಥಪುರ ಬಳಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬೈಕ್ ಸವಾರರು ಬಸ್‌ಗೆ ಕಲ್ಲು ಹೊಡೆದು ಕಿಟಕಿ ಗಾಜಿಗೆ ಹಾನಿ ಮಾಡಿದ್ದಾರೆ ಎಂದು ಚಾಲಕ ಲೋಕೇಶ್ ಬಿಳಿಕೆರೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೈಕ್ ಸವಾರರ ಪತ್ತೆಗೆ ಕ್ರಮ ವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next