Advertisement

ಹುಣಸೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಲಕ್ಷ್ಮಣತೀರ್ಥ ನದಿಯಲ್ಲಿ ಪತ್ತೆ

08:49 AM Sep 26, 2022 | Team Udayavani |

ಹುಣಸೂರು: ಮನೆಯಿಂದ ಹೊರ ಹೋಗಿದ್ದ ವ್ಯಕ್ತಿಯ ಶವ ಲಕ್ಷ್ಮಣತೀರ್ಥ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಹುಣಸೂರು ತಾಲೂಕು ಕಟ್ಟೆಮಳಲವಾಡಿಯ ಮೈಲಾರಿ (60) ಅವರು ಸೆ.8 ರಂದು ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದರು. ಅಂದಿನಿಂದ ಕಾಣೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುತ್ರ ಶೇಖರ್ ತಂದೆ ಕಾಣೆಯಾಗಿರುವ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಸೆ.24ರ ಶನಿವಾರ ಕಟ್ಟೆಮಳಲವಾಡಿ ಅಣೆಕಟ್ಟೆಯಲ್ಲಿ ಮೈಲಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಣೆಕಟ್ಟಿನ ಬಳಿ ತೆರಳಿದ್ದವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು, ಕುಟುಂಬದವರ ಸಮ್ಮಖದಲ್ಲಿ ಶವ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ವಾರಸುದಾರರಿಗೊಪ್ಪಿಸಿದರು. ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next