Advertisement

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

08:24 PM Apr 30, 2024 | Team Udayavani |

ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿಯೋರ್ವ ಮೃತಪಟ್ಟಿರುವ ಘಟನೆ ಹುಣಸೂರು-ಮಂಗಳೂರು ಹೆದ್ದಾರಿಯ ಬೈಪಾಸ್ ರಸ್ತೆಯ ಮೂರಮ್ಮ ದೇವಾಲಯದ ಬಳಿ ನಡೆದಿದೆ.

Advertisement

ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಹೋಬಳಿಯ ಕೆಳಗನ ಹಳ್ಳಿ ದಡದ ಕೊಪ್ಪಲು ಗ್ರಾಮದ ಬಸವರಾಜ್(52) ಮೃತಪಟ್ಟವರು.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

ಘಟನೆ ವಿವರ: ಏ.28 ರಂದು ಬಸವರಾಜು ಹುಣಸೂರಿನ ಸಂಬಂಧಿಕರ ಮನೆಗೆ ಬಂದು ಹೆದ್ದಾರಿ ಬದಿಯಲ್ಲಿ ನಡೆದು ತೆರಳುತ್ತಿದ್ದ ವೇಳೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.

ತೀವ್ರ ಗಾಯಗೊಂಡಿದ್ದ ಆತನನ್ನು ದಾರಿಹೋಕರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next