Advertisement

ಸಾವಿನಲ್ಲೂ ಒಂದಾದ ಕಾಫಿನಾಡಿನ ಈ ದಂಪತಿ : ಕುಟುಂಬಸ್ಥರ ಆಕ್ರಂದನ

12:34 PM May 11, 2021 | Team Udayavani |

ಚಿಕ್ಕಮಗಳೂರು : ಪತಿಯ ಸಾವಿನ ಸುದ್ದಿಯನ್ನು ಕೇಳಿ ಪತ್ನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ನಡೆದಿದೆ.

Advertisement

ನ್ಯುಮೋನಿಯಾದಿಂದ ಬಳಲುತ್ತಿದ್ದ ಹರೀಶ್ ಎಂಬುವವರು ಆಸ್ಪತ್ರೆಗೆ ದಾಖಲಾಗಿದ್ದರು.  ಮೊದಲು ಇವರನ್ನು ಕೆ.ಆರ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆಕ್ಸಿಜನ್ ಖಾಲಿಯಾದ್ದರಿಂದ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ವಿಷಯವನ್ನು ಹರೀಶ್ ಪುತ್ರ ಫೋನ್ ನಲ್ಲಿ ಅಮ್ಮನಿಗೆ ತಿಳಿಸಿದ್ದಾನೆ. ಪತಿಯ ಸಾವಿನ ಸುದ್ದಿ ಕೇಳುತ್ತಿದ್ದಂತೆ ಸೌಮ್ಯ ಕೂಡ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನಲ್ಲೂ ಗಂಡ-ಹೆಂಡತಿ ಹೊಂದಾಗಿದ್ದಾರೆ. ಆದ್ರೆ ಈ ಇಬ್ಬರು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟದೆ.

Advertisement

Udayavani is now on Telegram. Click here to join our channel and stay updated with the latest news.

Next