Advertisement

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ

03:58 PM May 12, 2024 | Team Udayavani |

ರಾಮನಗರ: ಪತಿಯೊಬ್ಬ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದಿರುವ ಘಟನೆ ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದಿದೆ.

Advertisement

ಪಿಚ್ಚನಕೆರೆ ಗ್ರಾಮದ ಮಂಜುಳಾ ಕೊಲೆಯಾದ ಮಹಿಳೆ. ರಾಜೇಶ್‌ ಕೊಲೆಗೈದ ಆರೋಪಿ ಪತಿ.

ಮಂಜುಳಾ ಹಾಗೂ ರಾಜೇಶ್‌ ಪರಸ್ಪರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ನಡುವೆಯೂ ಪತಿ ರಾಜೇಶ್‌ ಪತ್ನಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಭಾನುವಾರ(ಮೇ.12 ರಂದು) ದೊಡ್ಡಮುದುವಾಡಿ ಗೇಟ್ ಬಸ್ ನಿಲ್ದಾಣದ ಬಳಿ ಮಂಜುಳಾ ನಿಂತಿದ್ದಾಗ ರಾಡ್ ನಿಂದ ಹಲ್ಲೆ ರಾಜೇಶ್‌ ಪರಾರಿ ಆಗಿದ್ದಾನೆ. ತಲೆಗೆ ಏಟು ಬಿದ್ದ ಪರಿಣಾಮ ತೀವ್ರ ರಕ್ತಸ್ರಾವದಿಂದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಆರೋಪಿ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next