Advertisement

ದೇಹವನ್ನು 15 ತುಂಡು ಮಾಡಿ ಕಾಲುವೆಗೆ ಎಸೆದು ನಾಪತ್ತೆ ಕಥೆ ಕಟ್ಟಿದ ಭೂಪ

08:40 AM Apr 09, 2018 | Team Udayavani |

ಸವಣೂರು (ಪುತ್ತೂರು): ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿ ದೇಹವನ್ನು 15 ತುಂಡು ಮಾಡಿ ಕಾಲುವೆಗೆ ಎಸೆದಿರುವ ಆಘಾತಕಾರಿ ಘಟನೆ ಹೊಸಪೇಟೆಯಲ್ಲಿ  ಸಂಭವಿಸಿದೆ. ಪುತ್ತೂರು ತಾಲೂಕು ಕೈಮಣ ಗ್ರಾಮದ ಅಣವುಮೂಲೆ ಚಂದ್ರ ಹಾಸ (27)ಆರೋಪಿ.ಆತನ ಪತ್ನಿ ಭಾರತಿ (24) ಕೊಲೆಯಾದವರು. 8 ವರ್ಷಗಳ ಹಿಂದೆ ಬಳ್ಳಾರಿ ಹೊಸಪೇಟೆಯ ಬಟ್ಟೆ ಅಂಗಡಿಗೆ ಕೆಲಸಕ್ಕೆ ಸೇರಿದ ಚಂದ್ರಹಾಸ ಅದೇ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಂಪಿಯ ಎಂ.ಪಿ. ಪ್ರಕಾಶ್‌ ನಗರದ ಭಾರತಿಯನ್ನ ಪ್ರೀತಿಸಿ ಮದುವೆಯಾಗಿದ್ದನು. ನಂತರ ತಾನೇ ಒಂದು ಬಟ್ಟೆ ಅಂಗಡಿ ಪ್ರಾರಂಭಿಸಿ ವ್ಯಾಪಾರ ಕೂಡ ಆರಂಭಿಸಿದ ಚಂದ್ರಹಾಸ ನಗರದ ಸುಣ್ಣದ ಬಟ್ಟಿ ಏರಿಯಾದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದನು.

Advertisement

ಘಟನೆಯ ವಿವರ
ಫೆ. 19ರಂದು ಕಾರು ಕೊಡಿಸು  ವಂತೆ ಚಂದ್ರಹಾಸನಲ್ಲಿ ಪತ್ನಿ ಭಾರತಿ ಒತ್ತಾಯಿಸಿದ್ದರು.  ಅದೇ ವಿಚಾರಕ್ಕೆ ಸಂಬಂಧಿಸಿ ಅವರೊಳಗೆ ಜಗಳ ಶುರುವಾಯಿತು. ಈ ವೇಳೆ ಚಂದ್ರಹಾಸ ಪತ್ನಿಯ ಕಪಾಳಕ್ಕೆ ಬಲವಾಗಿ ಹೊಡೆದಿದ್ದು. ಹೊಡೆತದ ಪರಿಣಾಮ ಭಾರತಿ ತಲೆ ತಿರುಗಿ ಬಿದ್ದು ಮೃತಪಟ್ಟರು. ಅದರಿಂದ ಹೆದರಿದ ಚಂದ್ರಹಾಸ, ಪತ್ನಿಯ ದೇಹವನ್ನು ಹದಿನೈದು ತುಂಡುಮಾಡಿ, ನಾಲ್ಕು ಬ್ಯಾಗ್‌ಗಳಲ್ಲಿ ತುಂಬಿ ನಗರದ ರೈಲು ನಿಲ್ದಾಣ ರಸ್ತೆಯ ಎಲ್‌ಎಲ್‌ಸಿ ಕಾಲುವೆಯಲ್ಲಿ ಎಸೆದು ಹೋಗಿರುತ್ತಾನೆ ಎಂದು ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ನಾಪತ್ತೆ ನಾಟಕವಾಡಿದ
ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ಚಂದ್ರಹಾಸ, ಆಕೆಯ ತವರು ಮನೆಯವರಿಗೂ ಸುದ್ದಿಮುಟ್ಟಿಸಿದ್ದ. ಎಲ್ಲರೂ ಸೇರಿ ಹುಡುಕೋಣ, ಪೊಲೀಸ್‌ ಠಾಣೆಗೆ ದೂರು ಕೊಡುವುದು ಬೇಡ ಎಂದು ಕುಟುಂಬದವರನ್ನು ನಂಬಿಸಿ, ಕೆಲವು ದಿನಗಳ ಕಾಲ ಪತ್ನಿಯನ್ನು ಹುಡುಕಿದಂತೆ ನಟಿಸಿದ ಆತ ಬಳಿಕ ತಾನೇ ನಾಪತ್ತೆಯಾಗಿದ್ದ. ಅನುಮಾನಗೊಂಡ ಮೃತ ಮಹಿಳೆಯ ಅಣ್ಣ ಈ ಕುರಿತು ಹೊಸಪೇಟೆ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಬೆನ್ನು ಬಿದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡರು. ಕಣ್ಮರೆಯಾಗಿದ್ದ ಚಂದ್ರಹಾಸನನ್ನ ಎ.5ರಂದು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣದ ನಿಜಾಂಶ ಬೆಳಕಿಗೆ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next