Advertisement

Davanagere; ಮದ್ಯದ ಅಮಲಿನಲ್ಲಿ ಪತ್ನಿಯನ್ನು ಕೊಂದ ಪತಿ!

12:45 PM Feb 01, 2024 | Team Udayavani |

ದಾವಣಗೆರೆ: ಮದ್ಯದ ಅಮಲಿನಲ್ಲಿ ವ್ಯಕ್ತಿಯೋರ್ವ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಸಮೀಪದ ಶಿರಮ ಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಅರ್ಪಿತಾ (24 ವ) ಕೊಲೆಯಾದ ಮಹಿಳೆ. ಹನುಮಂತ (28) ಕೊಲೆ ಮಾಡಿದ ಆರೋಪಿ.

ಗ್ರಾಮ ದೇವತೆಯ ಜಾತ್ರೆಗಾಗಿ ನೆಂಟರಿಷ್ಟರು ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಅರ್ಪಿತಾ ಮತ್ತು ಹನುಮಂತ ನಡುವೆ ಜಗಳ ಪ್ರಾರಂಭವಾಗಿದೆ. ಕುಡಿದ ಅಮಲಿನಲ್ಲಿ ಪತಿ ಹನುಮಂತ ತನ್ನ ಪತ್ನಿ‌ ಅರ್ಪಿತಾಗೆ ಹೊಡೆದಿದ್ದಾನೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಎಂ. ಸಂತೋಷ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾವಣಗೆರೆ ಗ್ರಾಮಾಂತರ ಪೊಲೀಸರು ಹನುಮಂತನನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next