Advertisement

ಕೌಟುಂಬಿಕ ಕಲಹ: ನಡುಬೀದಿಯಲ್ಲೇ ಪತ್ನಿಯನ್ನು ಇರಿದು ಕೊಂದ ಪತಿ

12:12 AM Jul 01, 2020 | Hari Prasad |

ಬೆಂಗಳೂರು: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ನಡುಬೀದಿಯಲ್ಲೇ ಇರಿದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Advertisement

ನಗರದ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಲವಕುಶ ನಗರ ನಿವಾಸಿಯಾಗಿರುವ ಹೇಮಾ (32) ಮೃತ ಮಹಿಳೆ. ಕೃತ್ಯ ಎಸಗಿದ ಬಳಿ ಆರೋಪಿ ಪತಿ ಮಂಜುನಾಥ್ ತಾನೇ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಮಂಜುನಾಥ್ ಟೆಂಪೋ ಟ್ರಾವೆಲ್ಲರ್ ಚಾಲಕನಾಗಿದ್ದು, ಹೇಮಾ ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದ. ಮೂಲತಃ ಹಾಸನ ಜಿಲ್ಲೆಯವನಾಗಿರು ಮಂಜುನಾಥ್ ತುಮಕೂರು ಜಿಲ್ಲೆಯ ಹೇಮಾ ಅವರನ್ನು 12 ವರ್ಷಗಳ ಹಿಂದೆ ವಿವಾಹವಾಗಿದ್ದ. ಈ ದಂಪತಿಗೆ ಒಂದು ಗಂಡು ಹಾಗೂ ಹೆಣ್ಣು ಮಗುವಿದೆ. ದಂಪತಿಗಳ ನಡುವೆ ಕೌಟುಂಬಿಕ ಕಲಹ ನಡೆಯುತ್ತಿತ್ತು ಎಂಬ ವಿಚಾರವೂ ಇದೀಗ ತಿಳಿದುಬಂದಿದೆ.

ಪತಿ ವಿರುದ್ಧ ಪತ್ನಿ ಹೇಮಾ ಈ ಹಿಂದೆ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಿರಿಯರು ರಾಜೀ ಸಂಧಾನ ನಡೆಸಿದ್ದ ಬಳಿಕ ದಂಪತಿ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು. ಆದರೂ ಇವರಿಬ್ಬರ ನಡುವೆಪದೇ ಪದೇ ಜಗಳ ನಡೆಯುತ್ತಿತ್ತು‌ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

ಅದೇ ರೀತಿಯಲ್ಲಿ ಮಂಗಳವಾರ ಸಂಜೆಯೂ ದಂಪತಿ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ಹೋಗಿದೆ. ಮನೆಯಲ್ಲಿ ಪತ್ನಿ ಮೇಲೆ ಹಲ್ಲೆ ನಡೆಸಿರುವ ಆರೋಪಿ ಮಂಜುನಾಥ್ ಮನೆಯಲ್ಲಿದ್ದ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಹೇಮಾ ಕೂಗಿಕೊಂಡು ಮನೆಯಿಂದ ಹೊರಗೆ ಓಡಿ ಬಂದಿದ್ದು, ಆರೋಪಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದ.

ಪತಿಯಿಂದ ಇರಿತಕ್ಕೊಳಗಾಗಿ ತೀವ್ರ ರಕ್ತಸ್ರಾವವಾಗಿ ರಸ್ತೆಯಲ್ಲಿ ಬಿದ್ದಿದ್ದ ಹೇಮಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಆರೋಪಿ ತಾನೇ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ರಾಜಗೋಪಾಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next