ಮಧುಗಿರಿ: ಅನೈತಿಕ ಸಂಬಂಧದ ಬಗ್ಗೆ ಅನುಮಾನಗೊಂಡ ಪತಿ ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ರಾತ್ರಿ ಮಲಗಿದ್ದಾಗ ಪಿಯುಸಿ, 7ನೇ ತರಗತಿ, ಹಾಗೂ 4 ನೇ ತರಗತಿ ಓದುತ್ತಿದ್ದ ಮೂವರು ಹೆಣ್ಣು ಮಕ್ಕಳು ಹಾಗೂ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಮನೆಗೆ ಬೀಗ ಹಾಕಿಕೊಂಡು ಪರಾರಿಯಾದ ಘಟನೆ ನಡೆದಿದೆ.
ತಾಲೂಕಿನ ಐಡಿಹಳ್ಳಿ ಹೋಬಳಿಯ ಮುದ್ದನೇರಳೆಕೆರೆ ಗ್ರಾಮದ ರಾಮಾಂಜಿನಪ್ಪ ಎಂಬುವವನೆ ಈ ಕೃತ್ಯ ನಡೆಸಿದ ಪಾಪಿಯಗಿದ್ದು, ಪತ್ನಿ ಶಾಂತಮ್ಮ ಸ್ಥಳದಲ್ಲೇ ಮೃಪಟ್ಟಿದ್ದಾಳೆ. ಮೂವರು ಹೆಣ್ಣು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಕರಣ ಮಿಡಿಗೇಶಿ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗಿದ್ದು ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ.