Advertisement
ಪತಿ ಮಹಮ್ಮದ್ ಅಕ್ರಂ ಎಂಬಾತನ ವಿರುದ್ಧ ಪತ್ನಿ ಸುದ್ದು ಗುಂಟೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 30 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ವಸ್ತುಗಳನ್ನು ವರದಕ್ಷಿಣೆಯಾಗಿ
Related Articles
Advertisement
ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತೆಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ನನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪವನ್ ದ್ಯಾವಣ್ಣನವರ್ ಬಂಧಿತ ಕಾನ್ಸ್ಟೆàಬಲ್. ಚಾಮರಾಜನಗರ ಮೂಲದ ಯುವಕನನ್ನು ಅಪ್ರಾಪ್ತೆ ಪ್ರೀತಿಸುತ್ತಿದ್ದಳು. ಜು.27ರಂದು ಮನೆ ತೊರೆದಿದ್ದ ಬಾಲಕಿ ಕೆ.ಪಿ.ಅಗ್ರಹಾರದ ಸಮೀಪದ ಪಾರ್ಕ್ನಲ್ಲಿ ಓಡಾಡುತ್ತಿದ್ದಳು. ಕರ್ತವ್ಯದಲ್ಲಿದ್ದ ಪವನ್ ಆಕೆಯನ್ನು ಗಮನಿಸಿ ಆಕೆಯ ಬಳಿ ಎಲ್ಲಿಗೆ ಹೋಗಬೇಕೆಂದು ಪ್ರಶ್ನಿಸಿದ್ದ. ಆಕೆ ಚಾಮರಾಜನಗರಕ್ಕೆ ಹೋಗಬೇಕೆಂದು ಹೇಳಿದ್ದಳು. ಡ್ರಾಪ್ ಕೊಡುವುದಾಗಿ ನಂಬಿಸಿ ಆಕೆಯನ್ನು ಮನೆಗೆ ಕರೆದೊಯ್ದು ಪವನ್ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.