Advertisement

ಲಿಂಗಸೂಗುರು: ಕೊಡಲಿಯಿಂದ ಪತ್ನಿ ಕೊಲೆಗೈದು ಮಕ್ಕಳೊಂದಿಗೆ ಠಾಣೆಗೆ ಬಂದು ಶರಣಾದ ಪತಿ!

01:16 PM Aug 17, 2022 | Team Udayavani |

ಲಿಂಗಸೂಗುರು: ಪತ್ನಿ ಶೀಲ ಶಂಕಿಸಿ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತಿ ಇಬ್ಬರು ಮಕ್ಕಳೊಂದಿಗೆ ಠಾಣೆಗೆ ಬಂದು ಶರಣಾದ ಘಟನೆ ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.

Advertisement

ಇಂದು ಬೆಳಗ್ಗೆ ( ಬುಧವಾರ) 7-30 ಗಂಟೆಯ ಸುಮಾರಿಗೆ ಗುಡದನಾಳ ಗ್ರಾಮದ ಜೆಟ್ಟೆಪ್ಪ ತನ್ನ ಹೆಂಡತಿ ರೇಣುಕಾಳನ್ನು (26 ) ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಸಂಬುಡ ಗ್ರಾಮದ ರೇಣುಕಾಳ ಮದುವೆ 6-7 ವರ್ಷಗಳ ಹಿಂದೆ ನಡೆದಿತ್ತು. ಅದೇ ಗ್ರಾಮದ ಬೇರೆ ವ್ಯಕ್ತಿಯ ಜತೆ ಹೆಂಡತಿ ಪೋನ್ ನಲ್ಲಿ ಮಾತಾಡುತ್ತಿದ್ದಾಳೆ ಎಂದು ಗಂಡ ಶಂಕಿಸುತ್ತಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗುತ್ತಿತ್ತು. ಮಂಗಳವಾರ ಸಂಜೆ ಕೂಡ ಇದೇ ವಿಚಾರವಾಗಿ ಜಗಳವಾಗಿತ್ತು.

ಇದನ್ನೂ ಓದಿ: ಚಾಕು ಇರಿತ ಪ್ರಕರಣ: ಸಿದ್ದರಾಮಯ್ಯ ಹೇಳಿಕೆ ಇಂತಹ ಗಲಭೆಗಳಿಗೆ ಕುಮ್ಮಕ್ಕು- ಬಿ.ವೈ.ರಾಘವೇಂದ್ರ

ರೇಣುಕಾ ಇಂದು ಬೆಳಗ್ಗೆ ತವರು ಮನೆಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಗಂಡ ಕೊಡಲಿಯಿಂದ ತಲೆಗೆ ಬಲವಾಗಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ನಂತರ ಜೆಟ್ಟಪ್ಪ ಮಕ್ಕಳೊಂದಿಗೆ ಲಿಂಗಸೂಗುರು ಠಾಣೆಗೆ ಬಂದು ಶರಣಾಗಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next