Advertisement

ಹಟ್ಟಿ ಚಿನ್ನದ ಗಣಿ: ಕಲ್ಲು ಮಿಶ್ರಿತ ಮಣ್ಣು ಕುಸಿದು ಕಾರ್ಮಿಕ ಸಾವು

12:30 AM Feb 11, 2019 | Team Udayavani |

ಹಟ್ಟಿ ಚಿನ್ನದ ಗಣಿ: ಚಿನ್ನದ ಗಣಿ ಕಂಪನಿಯ ಮಲ್ಲಪ್ಪ ಶಾಫ್ಟ್‌ನ ಭೂಮಿಯ 1500 ಮೀಟರ್‌ ಆಳದಲ್ಲಿ ಕಲ್ಲು ಮಿಶ್ರಿತ ಸಡಿಲ ಮಣ್ಣು ಕುಸಿದು ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಆನ್ವರಿ ಗ್ರಾಮದ ದಾವಲಸಾಬ್‌ ಎಂ.ಡಿ. ಹುಸೇನ್‌ (45) ಮೃತ ಕಾರ್ಮಿಕ. ಭೂಮಿಯ 1500 ಮೀಟರ್‌ ಅಳದಲ್ಲಿ ಮಣ್ಣು ಗಟ್ಟಿ ಇದೆಯೋ ಇಲ್ಲವೋ ಎಂಬ ಪರೀಕ್ಷೆಗೆ ತೆರಳಿದಾಗ ದುರ್ಘ‌ಟನೆ ಜರುಗಿದೆ. ಇತರೆ ಕಾರ್ಮಿಕರು ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ಚಿನ್ನದ ಗಣಿ ಕಂಪನಿ ಪ್ರಧಾನ ವ್ಯವಸ್ಥಾಪಕರು ಹಾಗೂ ವಿವಿಧ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next