Advertisement

ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಖಂಡಿಸಿ ಮನವಿ

04:22 PM May 30, 2020 | Naveen |

ಹೂವಿನಹಡಗಲಿ: ರಾಜ್ಯದಲ್ಲಿ ಮೇಲಿಂದ ಮೇಲೆ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಯುತ್ತಿದ್ದು ಇದನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಟಿಯುಸಿ ಸಂಯುಕ್ತವಾಗಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿತು.

Advertisement

ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ರಕ್ಷಣೆ ಇಲ್ಲದೆ ಕೆಲಸ ಮಾಡುವುದು ತೊಂದರೆಯಾಗಿದೆ. ಕಾರಣ ಈ ಕೂಡಲೇ ಆವರಿಗೆ ಸೂಕ್ತವಾದ ರಕ್ಷಣೆ ನೀಡಬೇಕು ಹಾಗೂ ಆವರ ಜ್ವಲಂತ ಸಮಸ್ಯೆಗಳನ್ನು ಈ ಕೂಡಲೇ ಸರ್ಕಾರ ಬಗೆಹರಿಸಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ತಹಶೀಲ್ದಾರ್‌ ವಿಜಯ್‌ ಕುಮಾರ್‌ ಇವರಿಗೆ ಮನವಿ ಪತ್ರ ಸಲ್ಲಿಸಿದರು. ಸಂದರ್ಭದಲ್ಲಿ ಚನ್ನಮ್ಮ, ವಿಜಯಲಕ್ಷ್ಮೀ, ಗೀತಾಬಾಯಿ, ಮಾಲಾಬಾಯಿ, ಎಚ್‌. ರೇಖಾ, ಗುಡ್ಲಾಮ್ಮ, ನೇತ್ರಾಬಾಯಿ, ನೀಲಮ್ಮ ಮುಂತಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next