Advertisement

ಬೆಚ್ಚಿ ಬೀಳಿಸುವ ಘಟನೆ: ಭಿಕ್ಷೆ ಬೇಡುವಂತೆ ನಟಿಸಿ TDP ನಾಯಕನ ಮೇಲೆ ಮಾರಾಕಾಸ್ತ್ರದಿಂದ ದಾಳಿ

01:45 PM Nov 17, 2022 | Team Udayavani |

ಹೈದರಾಬಾದ್ : ಭಿಕ್ಷೆ ಬೇಡುವಂತೆ ನಟಿಸಿ ಮನೆಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ತನ್ನಲ್ಲಿದ್ದ ಹರಿತವಾದ ಆಯುಧದಿಂದ ಟಿಡಿಪಿ ನಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ.

Advertisement

ಘಟನೆಯಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪೋಲ್ನಾಟಿ ಶೇಷಗಿರಿ ರಾವ್ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂಧ್ರಪ್ರದೇಶದ ತುಲಿಯಲ್ಲಿರುವ ಪೋಲ್ನಾಟಿ ಶೇಷಗಿರಿ ರಾವ್ ಅವರ ಮನೆಗೆ ಭಿಕ್ಷೆ ಬೇಡುವ ರೀತಿಯಲ್ಲಿ ವೇಷ ಧರಿಸಿಕೊಂಡು ಬಂದ ವ್ಯಕ್ತಿ ಶೇಷಗಿರಿ ಅವರಲ್ಲಿ ಭಿಕ್ಷೆ ಕೇಳಿದ್ದಾನೆ ಅದರಂತೆ ನಾಯಕ ಮನೆಯಲ್ಲಿದ್ದ ಅಕ್ಕಿ ತಂದು ವ್ಯಕ್ತಿಯ ಜೋಳಿಗೆಗೆ ಸುರಿಯುವ ವೇಳೆ ತನ್ನಲ್ಲಿದ್ದ ಹರಿತವಾದ ಕತ್ತಿಯಿಂದ ಶೇಷಗಿರಿ ರಾವ್ ಅವರ ಮೇಲೆ ದಾಳಿ ನಡೆಸಿ ಮನೆಯ ಹೊರಗೆ ಬೈಕ್ ನಲ್ಲಿ ನಿಂತ್ತಿದ್ದ ಇನ್ನೋರ್ವ ಸಹಚರನ ಜೊತೆ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿಯ ದೃಶ್ಯ ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ದಾಳಿಯಲ್ಲಿ ಶೇಷಗಿರಿ ರಾವ್ ಅವರ ತಲೆ ಮತ್ತು ಕೈಗೆ ಗಂಭೀರ ಗಾಯಗಳಾಗಿವೆ, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಕಾಕಿನಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ : ವಿಡಿಯೋ: ಚಾಲಕನ ಅಶ್ಲೀಲ ಪ್ರಶ್ನೆಗೆ ಹೆದರಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಬಾಲಕಿ ಗಂಭೀರ

Advertisement

 

Advertisement

Udayavani is now on Telegram. Click here to join our channel and stay updated with the latest news.

Next