Advertisement

ಹೈದರಾಬಾದ್ ಪಾಲಿಕೆ ಫಲಿತಾಂಶ ಬಿಜೆಪಿಯ ವಿಶ್ವಾಸವನ್ನು ಹೆಚ್ಚಿಸಿದೆ : ಸಿ.ಟಿ ರವಿ

08:19 PM Dec 04, 2020 | Mithun PG |

ಬೆಳಗಾವಿ:  ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಯ ವಿಶ್ವಾಸ ಹೆಚ್ಚಿದೆ. ಇದರೊಂದಿಗೆ   ಭಾಗ್ಯ ನಗರವಾಗುವತ್ತ ದಿಟ್ಡ ಹೆಜ್ಜೆ ಇಟ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಿ.ಟಿ ರವಿ ಹೇಳಿದರು.

Advertisement

ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹೈದರಾಬಾದ್ ಪಾಲಿಕೆಯಲ್ಲಿ ಬಿಜೆಪಿ ಸ್ಥಾನ 10 ಪಟ್ಟು ಹೆಚ್ಚಾಗಿದೆ.  ಈ ಫಲಿತಾಂಶ ಮುಂದೆ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸುಳಿವು ನೀಡಿದೆ ಎಂದರು.

ಹೈದರಾಬಾದ್ ಪಾಲಿಕೆಯ ಚುನಾವಣೆಯಲ್ಲಿ ಕಠಿಣ ಶ್ರಮಪಟ್ಟ ಕಾರ್ಯಕರ್ತರು ಯಶಸ್ವಿ ಸೀಮೋಲ್ಲಂಘನೆ ಮಾಡಿದ್ದಾರೆ. ಇದರೊಂದಿಗೆ ದಕ್ಷಿಣ ಭಾರತದಲ್ಲಿ ಬಿಜೆಪಿ ಸಾಧನೆ ಮತ್ತಷ್ಟು ವಿಸ್ತಾರಗೊಳ್ಳುವ ಅವಕಾಶ ಹೆಚ್ಚಿದೆ ಎಂದು ಸಿ ಟಿ ರವಿ ಹೇಳಿದರು.

ರಾಜ್ಯದ ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರು ಕಿತ್ತಾಟ ಆರಂಭವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಸಂಪುಟ ವಿಸ್ತರಣೆ ಪಕ್ಷದ ಆಂತರಿಕ ವಿಚಾರ,ಇದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ: ಅರುಣ್ ಸಿಂಗ್

Advertisement

ಇದನ್ನೂ ಓದಿ:  ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದ ನ್ಯಾಯಾಲಯ

Advertisement

Udayavani is now on Telegram. Click here to join our channel and stay updated with the latest news.

Next