Advertisement

ನನಗೂ ಸಿಎಂ ಆಗುವ ಸಾಮರ್ಥ್ಯವಿದೆ: ಎಂ.ಬಿ ಪಾಟೀಲ

08:28 PM Jul 22, 2022 | Team Udayavani |

ಬೆಳಗಾವಿ: “ನನಗೂ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಇದೆ. ಆದರೆ ನಾನು ಬಯಸಿದರೆ ಮುಖ್ಯಮಂತ್ರಿ ಯಾಗುವುದಿಲ್ಲ. ಬದಲಾಗಿ ಸಮಾಜ, ಪಕ್ಷ, ಶಾಸಕರು ಹಾಗೂ ಹೈಕಮಾಂಡ್‌ ಬಯಸಿದರೆ ಮಾತ್ರ ಇದು ಸಾಧ್ಯ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ ಮುಖ್ಯಮಂತ್ರಿ ಆಕಾಂಕ್ಷಿಗಳಿಗೆ ತಿರುಗೇಟು ನೀಡಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ ಪಕ್ಷದಲ್ಲಿ ಈಗಲೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುವೆ ಮುಖ್ಯಮಂತ್ರಿ ಗಾದೆಗೆ ಪೈಪೋಟಿ ನಡೆದಿದೆ. ಅವರಿಬ್ಬರ ನಡುವೆ ನಾನೇಕೆ ಬರಲಿ? ನನಗೆ ನೇರವಾಗಿ ಬರುವ ಸಾಮರ್ಥ್ಯವಿದೆ. ಲಿಂಗಾಯತ, ದಲಿತ, ಒಕ್ಕಲಿಗ ಮೊದಲಾದ ಸಮಾಜದವರು ನಮ್ಮವರು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಾರೆ. ಆದರೆ ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್‌ ನಿರ್ಧಾರ ಮಾಡುತ್ತದೆ.

ಚುನಾವಣೆಯಲ್ಲಿ ಗೆದ್ದು ಬಂದ ಬಳಿಕ ಶಾಸಕರು ಹಾಗೂ ಪಕ್ಷದ ವರಿಷ್ಠರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next