Advertisement

ನಾನೂ ಸಚಿವ ಸ್ಥಾನ ಆಕಾಂಕ್ಷಿ: ಎಂ.ಪಿ.ಕುಮಾರಸ್ವಾಮಿ

11:29 PM Jan 28, 2020 | Lakshmi GovindaRaj |

ಚಿಕ್ಕಮಗಳೂರು: “ಚುನಾವಣೆಯಲ್ಲಿ ಮೂರು ಬಾರಿ ಗೆದ್ದು ಶಾಸಕನಾಗಿರುವ ನನಗೂ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುವುದು ಅಥವಾ ಯಾವುದೇ ರೀತಿಯ ಲಾಬಿ ಮಾಡಿಲ್ಲ.

Advertisement

ಸಚಿವ ಸ್ಥಾನ ಕೊಡುವುದು, ಬಿಡುವುದು ಸಿಎಂಗೆ ಬಿಟ್ಟ ವಿಚಾರ’ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದಿದ್ದು, ಸಾಕಷ್ಟು ಅನುಭವ ಇದೆ. ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ. ಒಂದು ವೇಳೆ, ಸಚಿವ ಸ್ಥಾನ ಸಿಗದಿದ್ದರೆ ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next