Advertisement

Ramanagara; ನಾನೂ ರಾಮಭಕ್ತ, ನಾವು ರಾಮೋತ್ಸವ ಮಾಡುತ್ತೇವೆ: ಕೈ ಶಾಸಕ ಇಕ್ಬಾಲ್ ಹುಸೇನ್

02:06 PM Jan 04, 2024 | Team Udayavani |

ರಾಮನಗರ: ರಾಮಮಂದಿರ ಕರಸೇವಕರ ಬಂಧನ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಧರ್ಮಯುದ್ಧ ನಡೆಯುತ್ತಿದ್ದರೆ ಇತ್ತ ರಾಮನಗರ ಕಾಂಗ್ರೆಸ್ ಶಾಸಕರು ರಾಮೋತ್ಸವದ ಜಪ ಮಾಡುತ್ತಿದ್ದಾರೆ.

Advertisement

ನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡುತ್ತೇನೆ. ರಾಮನಗರದಲ್ಲಿ ರಾಮೋತ್ಸವವನ್ನು ನಡೆಸಬೇಕೆಂದು ಚಿಂತನೆ ಮಾಡಿದ್ದೇವೆ. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡುತ್ತೇವೆ ಎಂದು ಚನ್ನಪಟ್ಟಣದಲ್ಲಿ ಕೈ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನು ಪೂಜಿಸ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲ್ಲ ಎಂದರು.

ಜನರನ್ನು ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಗೆ ತನ್ನದೇ ಆದ ಬದ್ಧತೆ, ಸಿದ್ದಾಂತವಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದಾರೋ ಇಲ್ವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರುವ ವಿಚಾರ. ಆದರೆ ನಾವು ರಾಮನನ್ನು ಮನೆ ದೇವರೆಂದು ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next