Advertisement

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

06:16 PM Jan 18, 2022 | Team Udayavani |

ಪಂಜಾಬ್:ನಾನೊಬ್ಬ ಯೋಧ, ಪಂಜಾಬಿನ ಗತವೈಭವವನ್ನು ಮರಳಿ ಸ್ಥಾಪಿಸುವುದುದೇ ನನ್ನ ಗುರಿ ಎಂದು ಪಂಜಾಬ್ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿರುವ ಭಗವಂತ ಮಾನ್ ಹೇಳಿದ್ದಾರೆ.

Advertisement

ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕೆಂದು ಆಮ್ ಆದ್ಮಿ ಪಕ್ಷ ಜನತಾ ಸರ್ವೆ ನಡೆಸಿತ್ತು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಗವಂತ ಮಾನ್ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಅವರು, ಪಂಜಾಬ್ ಪುನರುತ್ಥಾನದ ಕನಸು ಬಿಚ್ಚಿಟ್ಟಿದ್ದಾರೆ.

ರಾಜಕೀಯ ಪ್ರವೇಶದ ಬಳಿಕ ನನ್ನ ಬದುಕೇ ಬದಲಾಗಿದೆ. ಈ ಹಿಂದೆ ನಾನು ಕಾಮಿಡಿ ಮಾಡುತ್ತಿದ್ದಾಗ ಜನ ನನ್ನತ್ತ ನಗೆ ಬೀರುತ್ತಿದ್ದರು. ಈಗ ನನ್ನತ್ತ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ನಮ್ಮ ರಕ್ಷಣೆ ಹೊಣೆ ನಿನ್ನದು ಎಂಬ ಭಾವ ಅವರ ನೋಟದಲ್ಲಿದೆ. ಭಗವಂತ ಸರ್ವ ರಕ್ಷಕ. ನಾನು ಕೇವಲ ಮಾಧ್ಯಮ ಮಾತ್ರ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಂಜಾಬ್‌ನ ಗತ ವೈಭವವನ್ನು ಮರಳಿ ಸ್ಥಾಪಿಸುವುದು ನನ್ನ ಗುರಿ. ನಾನೊಬ್ಬ ಯೋಧ. ಗುರಿ ಸಾಧನೆಯಲ್ಲಿ ಎಂದಿಗೂ ಹಿಂದೆ ಬೀಳುವುದಿಲ್ಲ ಎಂದು ಹೇಳಿದ್ದಾರೆ.ಸ್ಟ್ಯಾಂಡ್ ಅಪ್  ಕಾಮಿಡಿಯನ್ ಆಗಿ ಹೆಸರು ಮಾಡಿದ್ದ ಮಾನ್ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯ ಪಾದಾರ್ಪಣೆ ಮಾಡಿದ್ದರು. ಜನರಿಂದಲೇ ಸಿಎಂ ಅಭ್ಯರ್ಥಿಯಾಗಿ ಆಯ್ಕೆಗೊಂಡಿರುವ ಅವರಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಈಗಾಗಲೇ ಅಭಿನಂದನೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next